ನ. 21 ರಿಂದ ಭತ್ತ ಖರೀದಿ ನೋಂದಣಿ; ಡಿಸೆಂಬರ್ 1 ರಿಂದ 2023 ಫೆಬ್ರವರಿ 28 ರವರೆಗೆ ಭತ್ತ ಖರೀದಿ ಕಾರ್ಯ

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರವು ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂ. ಗೆ 2040 ರೂ. ಮತ್ತು ಗ್ರೇಡ್ ಎ ಭತ್ತಕ್ಕೆ 2060 ರೂ. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿರುತ್ತದೆ. ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಬೆಳೆಯಲಾಗುವ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮಾ, ಅಭಿಲಾಷ ಮತ್ತು ಎಂಓ4 ಭತ್ತದ ತಳಿಗಳನ್ನು ಜಿಲ್ಲೆಯ ರೈತರಿಂದ ಖರೀದಿಸಿ, ಅದನ್ನು ಕುಚ್ಚಲಕ್ಕಿಯನ್ನಾಗಿ ಪರಿವರ್ತಿಸಿ, ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ಫಲಾನುಭವಿಗಳಿಗೆ ವಿತರಿಸಲು […]
ಮಲ್ಪೆ ಬೀಚ್, ಸೈಂಟ್ ಮೇರೀಸ್ ದ್ವೀಪಕ್ಕೆ ಬರುವ ಪ್ರವಾಸಿಗಳ ಸುರಕ್ಷತೆಗೆ ಗರಿಷ್ಠ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಮಲ್ಪೆ ಮತ್ತು ಸೈಂಟ್ ಮೇರೀಸ್ ದ್ವೀಪಕ್ಕೆ ದೇಶ ಮತ್ತು ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದು, ಬೀಚ್ನಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಪಾಲಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಈಗಾಗಲೇ ರಚಿಸಲಾದ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅಧ್ಯಯನ ಮಾಡಿ, ಮಲ್ಪೆ ಬೀಚ್ನಲ್ಲಿ ಸುರಕ್ಷತೆಗೆ ಸಂಬಂಧಿಸಿದಂತೆ ಪ್ರತ್ಯೇಕ ಎಸ್.ಓ.ಪಿ ರಚಿಸಿ, ಅದರಂತೆ ಬೀಚ್ ಉಸ್ತುವಾರಿ ವಹಿಸಿಕೊಂಡಿರುವವರು ಮತ್ತು ಜೀವ ರಕ್ಷಕರು ಕಾರ್ಯನಿರ್ವಹಿಸುವುದರ ಮೂಲಕ ಪ್ರವಾಸಿಗರು ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ತಮ್ಮ ಪ್ರವಾಸಿ ಕ್ಷಣಗಳನ್ನು ಆನಂದಿಸಲು ವ್ಯವಸ್ಥೆ ಮಾಡಬೇಕು ಜಿಲ್ಲಾಧಿಕಾರಿ […]
ನ. 19 ರಂದು ಬೆಳ್ಳೆ ಗ್ರಾಮದಲ್ಲಿ ಡಿಸಿ ಗ್ರಾಮ ವಾಸ್ತವ್ಯ

ಉಡುಪಿ: ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳೆ ಗ್ರಾಮದ ಗೀತಾಮಂದಿರ ಇಲ್ಲಿ ನವೆಂಬರ್ 19 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಯಲಿದ್ದು, ಬೆಳ್ಳೆ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೆಂಬರ್ 21 ರಿಂದ ಭತ್ತ ಖರೀದಿ ನೋಂದಣಿ ಕೇಂದ್ರ ಆರಂಭ: 7 ಕಡೆಗಳಲ್ಲಿ ಭತ್ತ ಖರೀದಿ ಕೇಂದ್ರ ಸ್ಥಾಪನೆ

ಉಡುಪಿ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕುರಿತು ಮಂಗಳವಾರದಂದು ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆ ನಡೆಸಲಾಯಿತು. ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಸ್ಥಳೀಯವಾಗಿ ಬೆಳದಿರುವ ಭತ್ತವನ್ನು ಖರೀದಿಸಲು ನವೆಂಬರ್ 21 ರಿಂದ ನೋಂದಣಿ ಕೇಂದ್ರಗಳನ್ನು ತೆರೆದು, ರೈತರ ನೋಂದಣಿಯನ್ನು ಆರಂಭಿಸುವಂತೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧಿಕಾರಿಗಳಿಗೆ ಸೂಚಿಸಿದರು. ಸ್ಥಳೀಯವಾಗಿ ಬೆಳೆಯುವ ಭತ್ತದ ತಳಿಗಳಾದ ಕಜೆ,ಜಯ,ಜ್ಯೋತಿ,ಪಂಚಮುಖಿ,ಸಹ್ಯಾದ್ರಿ, ಉಷಾ,ಅಭಿಲಾಷ,ಎಂಓ4 ಭತ್ತಕ್ಕೆ ಬೆಂಬಲ ಬೆಲೆ ಘೋಷಿಸಿದ್ದು,ಸಾಮಾನ್ಯ ಭತ್ತಕ್ಕೆ ರೂ.2540.00 ದರ ನಿಗದಿಪಡಿಸಲಾಗಿದೆ. ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ […]
ಉಡುಪಿ ಬೋರ್ಡ್ ಹೈಸ್ಕೂಲ್ನಲ್ಲಿ ಮಕ್ಕಳ ದಿನಾಚರಣೆ

ಉಡುಪಿ: ಮಕ್ಕಳು ಪ್ರತೀ ದಿನ ತಮ್ಮ ಬಾಲ್ಯದ ಸಂಭ್ರಮವನ್ನು ಆನಂದಿಸುವಂತೆ ಅವರ ಹಕ್ಕುಗಳನ್ನು ದೊರಕಿಸಲು ಸೂಕ್ತ ವಾತಾವರಣವನ್ನು ನಿರ್ಮಾಣ ಮಾಡುವ ಮೂಲಕ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಸೋಮವಾರದಂದು ಉಡುಪಿ ಬೋರ್ಡ್ ಹೈಸ್ಕೂಲ್ನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ರೋಟರಿ […]