ನ್ಯುಮೋನಿಯಾದಿಂದುಂಟಾಗುವ ಮಕ್ಕಳ ಸಾವಿನ ಪ್ರಕರಣಗಳನ್ನು ಶೂನ್ಯಕ್ಕೆ ತರಲು ಜಿಲ್ಲಾಧಿಕಾರಿ ಕರೆ

ಉಡುಪಿ: ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳು ನ್ಯುಮೋನಿಯಾ ಕಾರಣದಿಂದ ಮರಣ ಹೊಂದದಂತೆ ಎಲ್ಲ ವೈದ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮುಂಜಾಗ್ರತೆ ವಹಿಸಬೇಕು. ಮಕ್ಕಳಲ್ಲಿನ ಈ ಸಮಸ್ಯೆಯನ್ನು ಬೇಗನೆ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು ಮತ್ತು ಪೋಷಕರಿಗೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕು. ನ್ಯುಮೋನಿಯಾದಿಂದ ಆಗುವ ಮಕ್ಕಳ ಸಾವಿನ ಪ್ರಕರಣಗಳನ್ನು ಶೂನ್ಯಕ್ಕೆ ತರಲು ಎಲ್ಲರೂ ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕರೆ ನೀಡಿದರು. ಅವರು ಇಂದು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ […]

ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮ: ಒಂದು ತಿಂಗಳು ಜಾನುವಾರು ಸಾಗಾಟ ನಿಷೇಧ

ಉಡುಪಿ: ಚರ್ಮಗಂಟು ರೋಗವು ಕ್ಯಾಪ್ರಿಪಾಕ್ಸ್ ಎಂಬ ವೈರಾಣುವಿನಿಂದ ಜಾನುವಾರುಗಳಿಗೆ ಹರಡುವ ಖಾಯಿಲೆಯಾಗಿದ್ದು, ರೋಗಗ್ರಸ್ತ ಜಾನುವಾರುವಿನಿಂದ ಆರೋಗ್ಯವಂತ ಜಾನುವಾರುಗಳಿಗೆ ಹರಡುವುದರಿಂದ ಹಾಗೂ ರೋಗದಿಂದ ಜಾನುವಾರು ಮಾಲೀಕರುಗಳಿಗೆ ಆರ್ಥಿಕ ನಷ್ಟವುಂಟಾಗುವುದನ್ನು ತಡೆಗಟ್ಟುವ ಸಲುವಾಗಿ, ಜಿಲ್ಲೆಯಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಒಂದು ತಿಂಗಳು ಅಥವಾ ಮುಂದಿನ ಆದೇಶದವರೆಗೆ ಜಿಲ್ಲೆಯ ಒಳಗೆ ಮತ್ತು ಹೊರಗೆ ಜಾನುವಾರುಗಳಾದ ದನ ಮತ್ತು ಎಮ್ಮೆಯ ಸಾಗಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ, ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಹೈನುಗಾರರು ಹಾಗೂ ರೈತರು ಜಾನುವಾರು ಸಾಗಾಟ ಮಾಡದಂತೆ ಪಶು ಪಾಲನಾ ಇಲಾಖೆಯ […]

ಕರಡು ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಾಗಿರುವ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಉಡುಪಿ: ಎಪಿಕ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಿ, ಖಚಿತಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಬುಧವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಉಡುಪಿಯ ಬನ್ನಂಜೆಯಿಂದ ಅಜ್ಜರಕಾಡು ಹುತಾತ್ಮ ಸ್ಮಾರಕದವರೆಗೆ ನಡೆದ ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿದರು. ಚುನಾವಣೆಯಲ್ಲಿ ಮತ ಚಲಾಯಿಸಲು ಎಪಿಕ್ ಕಾರ್ಡ್ ಇದ್ದರೆ ಮಾತ್ರ ಸಾಲದು. […]

ನವೆಂಬರ್ 7 ರಿಂದ ಡಿಸೆಂಬರ್ 7 ರವರೆಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಜಿಲ್ಲೆಯಲ್ಲಿ ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ, 3 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವು ನವೆಂಬರ್ 7 ರಿಂದ ಡಿಸೆಂಬರ್ 7 ರ ಅವಧಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಈ ಕುರಿತು ಜಿಲ್ಲಾ ಮಟ್ಟದ ಕಾಲುಬಾಯಿ ರೋಗದ ನಿರ್ವಹಣಾ ಸಮಿತಿ ಸಭೆಯು ಬುಧವಾರದಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧ್ಯಕ್ಷತೆಯಲ್ಲಿ ನಡೆಯಿತು. ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಪಶುಪಾಲನಾ ಇಲಾಖೆಯ ಉಪ […]

ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ಆಟೋರಿಕ್ಷಾ ಸಂಚಾರದಲ್ಲಿ ಮಾರ್ಪಾಡು

ಉಡುಪಿ: ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ವ್ಯಾಪ್ತಿಯ ಪ್ರದೇಶಗಳು ಅಭಿವೃದ್ಧಿ ಹೊಂದಿ ಜನಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಕಾಪು, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲೂಕುಗಳು ರಚನೆಯಾಗಿರುವ ಹಿನ್ನೆಲೆ, ನಗರಗಳ ಜನಸಂಖ್ಯೆಗೆ ಅನುಗುಣವಾಗಿ ಆಟೋರಿಕ್ಷಾಗಳನ್ನು ಹೆಚ್ಚಿಸುವುದು, ರಿಕ್ಷಾ ನಿಲುಗಡೆಗೆ ಸ್ಥಳಾವಕಾಶದ ಕೊರತೆ, ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವುದು, ರಸ್ತೆ ಅಪಘಾತಗಳನ್ನು ತಡೆಯಲು, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯವನ್ನು ನಿಯಂತ್ರಿಸುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಅತೀ ಅವಶ್ಯವೆಂದು ಪರಿಗಣಿಸಿ, 2012 ಏಪ್ರಿಲ್ 21 ರ ಅಧಿಸೂಚನೆಯಲ್ಲಿ ಹೊರಡಿಸಿರುವ ಆದೇಶವನ್ನು […]