ಬ್ರಹ್ಮಾವರ: 94 ಸಿಸಿ ಅರ್ಜಿಗಳನ್ನು ಆದ್ಯತೆ ಮೇಲೆ ವಿಲೇವಾರಿ ಮಾಡಲು ಜಿಲ್ಲಾಧಿಕಾರಿ ಸೂಚನೆ

ಬ್ರಹ್ಮಾವರ: ತಾಲೂಕು ವ್ಯಾಪ್ತಿಯಲ್ಲಿ ಸಲ್ಲಿಕೆಯಾಗಿರುವ 94 ಸಿಸಿ ಕುರಿತ ಅರ್ಜಿಗಳನ್ನು ಆದಷ್ಟು ಶೀಘ್ರದಲ್ಲಿ ವಿಲೇ ಮಾಡುವಂತೆ ತಹಸೀಲ್ದಾರ್ ಅವರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಮಂಗಳವಾರ ಕಚ್ಚೂರು ಮಾಲ್ತಿದೇವಿ ಸಭಾಭವನದಲ್ಲಿ ನಡೆದ, ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ಸಾರ್ವಜನಿಕರು 94 ಸಿಸಿ ಹಾಗೂ ನಿವೇಶನ ನೀಡುವ ಕುರಿತು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ವಸತಿ ಮತ್ತು ನಿವೇಶನ ಕುರಿತು ಸಲ್ಲಿಕೆಯಾಗಿರುವ […]

ಕಾಪು ತೇಲುವ ರೆಸ್ಟೋರೆಂಟ್ ಹಾಗೂ ವಸತಿ ಗೃಹ ನಿಯಮ ಪರಿಶೀಲಿಸಿ ಮಂಜೂರಾತಿ

ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಉಳಿಯಾರು ಗ್ರಾಮದಲ್ಲಿ ಪ್ರವಾಸಿ ಆಕರ್ಷಣೆಯಾಗಿ ತೇಲುವ ರೆಸ್ಟೋರೆಂಟ್ ಹಾಗೂ ವಸತಿಗೃಹ ನಿರ್ಮಾಣ ಬಗ್ಗೆ ಅಗತ್ಯವಿರುವ ಎಲ್ಲಾ ನಿಯಮಗಳನ್ನು ಪರಿಶೀಲಿಸಿ, ಮಂಜೂರಾತಿ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಪು ತಾಲೂಕಿನ ಉಳಿಯಾರು ಗ್ರಾಮದ ಹಿನ್ನೀರಿನಲ್ಲಿ ಫ್ಲೋಟಿಂಗ್ ರೆಸ್ಟೋರೆಂಟ್ ಮತ್ತು ವಸತಿ ಗೃಹವನ್ನು ನಿರ್ಮಾಣ ಮಾಡಲು, ನಿಗದಿತ ಶುಲ್ಕ ಪಾವತಿ ಬಗ್ಗೆ […]

ಅನಾಥ ಪ್ರಾಣಿಗಳ ಕಳೇಬರ ವಿಲೇವಾರಿಗೆ ಮೊಬೈಲ್ ಚಿತಾಗಾರದ ವ್ಯವಸ್ಥೆ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಜಿಲ್ಲೆಯಲ್ಲಿ ಸಾವಿಗೀಡಾಗುವ ಅನಾಥ ಪ್ರಾಣಿಗಳ ಕಳೇಬರವನ್ನು ಪರಿಸರ ಸ್ವೀಕಾರ್ಹವಾಗಿ ವಿಲೇವಾರಿ ಮಾಡಲು ಮೊಬೈಲ್ ಚಿತಾಗಾರ ವ್ಯವಸ್ಥೆಗಳನ್ನು ಮಾಡುವಂತೆ ಪಶುಪಾಲನಾ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ನಿರ್ದೇಶನ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಬದಿಯಲ್ಲಿ ಅಪಘಾತಕ್ಕೀಡಾಗಿ ಮತ್ತು ಇತರೆ ಕಾರಣಗಳಿಂದಾಗಿ ಸಾವಿಗೀಡಾಗುವ ಪ್ರಾಣಿಗಳ ಕಳೇಬರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ವಿಲೇವಾರಿ ಮಾಡಲು ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿದೆ ಎಂಬ […]

ಇಂದ್ರಾಳಿ ರೈಲ್ವೆ ಬ್ರಿಡ್ಜ್ ರಸ್ತೆ ಕಾಮಗಾರಿ ಮಾರ್ಚ್ ನೊಳಗೆ ಪೂರ್ಣ: ಜಿಲ್ಲಾಧಿಕಾರಿಗೆ ಸಭೆಯಲ್ಲಿ ರಾ.ಹೆ ಅಧಿಕಾರಿಗಳಿಂದ ಮಾಹಿತಿ

ಉಡುಪಿ: ಮಂಗಳವಾರದಂದು ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಉಡುಪಿ ಚತುಷ್ಪಥ ರಸ್ತೆ ಕಾಮಗಾರಿ ಸಭೆಯು ಜಿಲ್ಲಾಧಿಕಾರಿ ಕೂರ್ಮಾ ರಾವ್ ಅಧ್ಯಕ್ಷತೆಯಲ್ಲಿ ನಡೆಯಿತು. ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ರಸ್ತೆ ಕಾಮಗಾರಿ ನಡೆಸುವ ಕುರಿತಂತೆ ಇದ್ದ ಎಲ್ಲಾ ಸಮಸ್ಯೆಗಳು ಇತ್ಯರ್ಥಗೊಂಡಿದ್ದು, ಕಾಮಗಾರಿ ನಿರ್ವಹಣೆಗೆ ಒಂದು ವಾರದಲ್ಲಿ ಆದೇಶ ಬರಲಿದ್ದು, ಮಾರ್ಚ್ ಒಳಗೆ ಕಾಮಗಾರಿಯನ್ನು ಮುಕ್ತಾಯಗೊಳಿಸಲಾಗುವುದು ಮತ್ತು ಪರ್ಕಳ ವ್ಯಾಪ್ತಿಯಲ್ಲಿ ರಸ್ತೆ ಕಾಮಗಾರಿ ನಡೆಸದಂತೆ ಕೋರ್ಟ್ ನಿಂದ ತಡೆ ಇರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ವಿಭಾಗದ […]

ವಿನೂತನ ಕಾಂಪೋಸ್ಟ್ ಬೆಡ್ ನಿರ್ಮಿಸಿ ತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯಕ್ಕೆ ಮಾದರಿಯಾಯ್ತು ಉಡುಪಿ ಜಿಲ್ಲಾಧಿಕಾರಿ ವಸತಿಗೃಹ

ಉಡುಪಿ: ತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಯೋಜನೆಗಳನ್ನು ರೂಪಿಸಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿರುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ಜಿಲ್ಲೆಯು ಪ್ರಸ್ತುತ ಮತ್ತೊಂದು ವಿನೂತನ ಸ್ವಚ್ಛತಾ ಕಾರ್ಯಕ್ರಮದ ಪ್ರಾಯೋಗಿಕ ಯೋಜನೆಗೆ ಜಿಲ್ಲಾಧಿಕಾರಿಗಳ ವಸತಿಗೃಹ ಸಾಕ್ಷಿಯಾಗಿದೆ. ಮನೆಯ ಕಾಂಪೌಂಡ್ ನಲ್ಲಿ ಬೀಳುವ ಒಣಕಸವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡುವ ವಿಧಾನವನ್ನು ಉಡುಪಿ ಜಿಲ್ಲಾಧಿಕಾರಿಗಳ ವಸತಿಗೃಹದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿದ್ದು, ವಸತಿಗೃಹದಲ್ಲಿನ ಕೈ ತೋಟದ ಒಣ ಹುಲ್ಲು, ತೋಟದ ಗಿಡಗಳಿಂದ ಬಿದ್ದಿದ್ದ ಗಿಡದ ಎಲೆಗಳು, ಮರದ ಮೇಲಿಂದ ಬಿದ್ದ […]