ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಇವರಿಗೆ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಯ ಗರಿ

ಉಡುಪಿ: ಭಾರತ ಚುನಾವಣಾ ಆಯೋಗವು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು “ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸುವಂತೆ ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ರಾಜ್ಯ ಮಟ್ಟದಲ್ಲಿ ಜ.25 ರಂದು ಬೆಂಗಳೂರು ಇಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗಿತ್ತು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ವಿವಿಧ ವಿಭಾಗಗಲ್ಲಿ ಅಧಿಕಾರಿ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದ್ದು, ಅದರಂತೆ “ಜಿಲ್ಲಾ ಚುನಾವಣಾಧಿಕಾರಿ” ವಿಭಾಗದಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಆಯ್ಕೆಯಾಗಿದ್ದು, ಬುಧವಾರದಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ […]

ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಉತ್ತಮ ಜನಸ್ಪಂದನೆ

ಕುಂದಾಪುರ: ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅವರ ಗ್ರಾಮಗಳಿಗೆ ತೆರಳಿ, ಅರಿತು ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಮತ್ತು ಸರಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜ.21 ರಂದು ನಾಗೂರಿನಶ್ರೀ ಲಲಿತ ಕೃಷ್ಣ ಕಲಾಮಂದಿರದಲ್ಲಿ ನಡೆದ ಕಿರಿಮಂಜೇಶ್ವರ ಗ್ರಾಮ ವ್ಯಾಪ್ತಿಯ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾಧಿಕಾರಿಗಳ […]

10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ಮಾಡಿಸಿಕೊಂಡವರು ನವೀಕರಣ ಮಾಡಿಸಿಕೊಳ್ಳಿ: ಕೂರ್ಮಾ ರಾವ್

ಉಡುಪಿ: ಜಿಲ್ಲೆಯಲ್ಲಿ ಕಳೆದ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೋಂದಣಿ ಮಾಡಿಸಿಕೊಂಡ ಪ್ರತಿಯೊಬ್ಬ ಸಾರ್ವಜನಿಕರೂ ತಮ್ಮ ವಿಳಾಸ ದೃಢೀಕರಣ ದಾಖಲೆಯೊಂದಿಗೆ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಧಾರ್ ನವೀಕರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ನೀಡಿರುವ ಆಧಾರ್ ವಿಶಿಷ್ಟ ಗುರುತಿನ ಚೀಟಿಯನ್ನು ಪ್ರತಿಯೊಬ್ಬ ಭಾರತೀಯ ಪ್ರಜೆಗಳೂ ಮಾಡಿಸಿಕೊಳ್ಳಬೇಕು,ಈಗಾಗಲೇ ಆಧಾರ್ ಕಾರ್ಡ್ ನೊಂದಣಿಯನ್ನು 10 ವರ್ಷಗಳ ಹಿಂದೆ […]

ಬೈಂದೂರು: ಜ. 21 ರಂದು ಕಿರಿಮಂಜೇಶ್ವರದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಜನವರಿ 21 ರಂದು ಬೆಳಗ್ಗೆ 11 ಗಂಟೆಗೆ ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಾಗೂರು ಒಡೆಯರ ಮಠ ಶ್ರೀ ಕೃಷ್ಣ ಲಲಿತ ಕಲಾಮಂದಿರದ ಇಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದು, ಸದ್ರಿ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮ ಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಮಟ್ಟದ ಯುವ ವಿದ್ಯಾರ್ಥಿ ಸಮ್ಮೇಳನ ಸಂಪನ್ನ

ಉಡುಪಿ: ಶುಕ್ರವಾರ ಉಡುಪಿ ಚರ್ಚಿನಲ್ಲಿ, ನೆಹರೂ ಯುವಕೇಂದ್ರ ಸಂಘಟನೆ ಉಡುಪಿ ಜಿಲ್ಲೆ, ಯುವ ವಿದ್ಯಾರ್ಥಿ ಸಂಚಲನ, ಉಡುಪಿ ಧರ್ಮಕ್ಷೇತ್ರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವ ವಿದ್ಯಾರ್ಥಿ ಸಮ್ಮೇಳನವನ್ನು ಏರ್ಪಡಿಸಲಾಗಿತ್ತು. ಕರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ಸಮಾಜದಲ್ಲಿ ಬದುಕುವ ಪ್ರತಿಯೋರ್ವನೂ ಮೊದಲು ಮಾನವನಾಗುವತ್ತ ಕಾರ್ಯಪ್ರವೃತ್ತನಾದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಮನುಷ್ಯ ಸದಾ ಕ್ರಿಯಾಶೀಲನಾಗಿರಲು ಬಯಸುತ್ತಾನೆ. ಯಾವುದಾದರೂ ಚಟುವಟಿಕೆಯಲ್ಲಿ ತನ್ನನ್ನೇ ತಾನು ತೊಡಗಿಸಿಕೊಳ್ಳುತ್ತಾನೆ. ಇದು ಮನುಷ್ಯರಲ್ಲಿ ಅಂತರ್ಗತವಾಗಿರುವ ಗುಣ. ವಿದ್ಯಾರ್ಥಿಗಳು ತಮ್ಮ […]