ಕೋವಿಡ್ ಹಿನ್ನೆಲೆ: ಜಿಲ್ಲಾಡಳಿತದಿಂದ ಹೊಸವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ

ಉಡುಪಿ: ಪ್ರಸ್ತುತ ಜಿಲ್ಲೆಯಲ್ಲಿ ಹೊಸ ವರ್ಷದ ಆಚರಣೆ ಹಾಗೂ ಇತರೆ ಸಮಾರಂಭಗಳಲ್ಲಿ ಸಾರ್ವಜನಿಕರು ಗುಂಪಾಗಿ ಸೇರುವುದರಿಂದ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಸಾಧ್ಯವಾಗದೇ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನೆಲೆ, ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಹಾಗೂ ಕೋವಿಡ್ -19 ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಈ ಕೆಳಕಂಡ ನಿಬಂಧನೆಗಳನ್ನು ವಿಧಿಸಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ. ಹೊಸ ವರ್ಷಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 31 ರಿಂದ ಜನವರಿ 2 ರ ವರೆಗೆ […]
ಜಿಲ್ಲಾಧಿಕಾರಿ ಕೂರ್ಮಾ ರಾವ್ ಜಿಲ್ಲಾಸ್ಪತ್ರೆ ಭೇಟಿ: ಕೋವಿಡ್ ಸಿದ್ದತೆ ಪರಿಶೀಲನೆ

ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ನಿರ್ವಹಣೆ ಕುರಿತಂತೆ ಪೂರ್ವಬಾವಿಯಾಗಿ ಕೈಗೊಂಡಿರುವ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಬುಧವಾರ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿನ ಆಕ್ಸಿಜಿನ್ ಘಟಕಗಳ ಕಾರ್ಯನಿರ್ವಹಣೆ, ಪೂರೈಕೆ, ವೆಂಟಿಲೇಟರ್ ಗಳ ಸುಸ್ಥಿತಿ ಹಾಗೂ ಕೋವಿಡ್ ಪರೀಕ್ಷಾ ಲ್ಯಾಬ್ನ ಸಮರ್ಪಕ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಉಪಸ್ಥಿತರಿದ್ದರು.
2 ಡೋಸ್ ಕೋವಿಡ್ ಲಸಿಕೆ ಪಡೆದಿರುವವರು ಬೂಸ್ಟರ್ ಡೋಸ್ ಹಾಕಿಸಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ: ಜನಸಾಮಾನ್ಯರು ಕೋವಿಡ್ ಸಾಂಕ್ರಾಮಿಕ ರೋಗದ ಬಗ್ಗೆ ಆತಂಕ ಪಡದೇ ಸರಳ ಮುನ್ನೆಚ್ಚರಿಕಾ ಕ್ರಮಗಳಾದ ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು, ಮಾಸ್ಕ್ ಗಳನ್ನು ಧರಿಸುವುದು ಸೇರಿದಂತೆ ಮತ್ತಿತರ ಕ್ರಮಗಳನ್ನು ತಪ್ಪದೇ ಪಾಲಿಸಬೇಕು. ಈಗಾಗಲೇ 2 ಡೋಸ್ ಕೋವಿಡ್ ಲಸಿಕೆ ಪಡೆದಿರುವವರು ಬೂಸ್ಟರ್ ಡೋಸ್ ಅನ್ನು ಪಡೆಯಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಕೋವಿಡ್ ಮುನ್ನೆಚ್ಚರಿಕೆ ಮತ್ತು ತಾಂತ್ರಿಕ ಸಲಹಾ ಸಮಿತಿ ಸಭೆಯ […]
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಪರಿಶೀಲಿಸಿದ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್

ಉಡುಪಿ: ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯದ ಅಂಗವಾಗಿ ಜಿಲ್ಲೆಗೆ ಭೇಟಿ ನೀಡಿದ ಜಿಲ್ಲಾ ಮತದಾರರ ಪಟ್ಟಿಯ ವೀಕ್ಷಕ ಹಾಗೂ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೋಮವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದರು. ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅವಧಿಯಲ್ಲಿ 8122 ಮಂದಿ ಯುವ ಮತದಾರರನ್ನು ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಯುವ ಮತದಾರರ ಸೇರ್ಪಡೆ ಕಾರ್ಯವನ್ನು ಚುನಾವಣಾ ಆಯೋಗವು ವರ್ಷದಲ್ಲಿ ನಿಗದಿಪಡಿಸಿರುವ […]
ಸರ್ಕಾರಿ ನೌಕರರು ಜನರ ನಿರೀಕ್ಷೆಗೆ ಸ್ಪಂದಿಸಿ ಪ್ರಾಮಾಣಿಕತೆಯಿಂದ ಕೆಲಸ ನಿರ್ವಹಿಸಬೇಕು: ನಿವೃತ್ತ ಜಿಲ್ಲಾಧಿಕಾರಿ ಕಲ್ಪನಾ

ಉಡುಪಿ: ಜನರಿಂದ ಜನರಿಗೋಸ್ಕರ ಇರುವ ಸರ್ಕಾರ ಜನಸಾಮಾನ್ಯರನ್ನು ಕೇಂದ್ರವನ್ನಾಗಿಟ್ಟುಕೊಂಡು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ. ಇವುಗಳನ್ನು ಅನುಷ್ಠಾನಗೊಳಿಸುವ ಕೆಲಸ ಕಾರ್ಯಾಂಗದ್ದಾಗಿದ್ದು, ಇದರ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿರುತ್ತದೆ. ಇದನ್ನು ಅರಿತು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಬಹುಪಾಲು ಜನರು ಸರ್ಕಾರದಿಂದ ಹೆಚ್ಚೇನೂ ನಿರೀಕ್ಷಿಸದೇ ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಿಕೊಂಡು ಹೋಗುತ್ತಿರುತ್ತಾರೆ. ಸರ್ಕಾರದಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಮಾತ್ರ ಅಪೇಕ್ಷಿಸುವ ಅವರ ನಿರೀಕ್ಷೆಗೆ ತಕ್ಕಂತೆ ನಾವು ಸ್ಪಂದಿಸಬೇಕು ಎಂದು ಉಡುಪಿ ಜಿಲ್ಲೆಯ ಪ್ರಥಮ ಜಿಲಾಧಿಕಾರಿ(ಈಗ ನಿವೃತ್ತ) ಕಲ್ಪನಾ ಹೇಳಿದರು. […]