ಪಂಚಭೂತಗಳಲ್ಲಿ ಲೀನರಾದ ಸ್ಪಂದನಾ : ಪತ್ನಿಗೆ ಕಣ್ಣೀರಿನ ಮೂಲಕ ವಿದಾಯ ಹೇಳಿದ ವಿಜಯ ರಾಘವೇಂದ್ರ

ಕನ್ನಡ ಚಿತ್ರರಂಗದ ಜನಪ್ರಿಯ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಇನ್ನು ನೆನಪು ಮಾತ್ರ. ಬ್ಯಾಂಕಾಕ್​ನಲ್ಲಿ ಹೃದಯಾಘಾತಕ್ಕೊಳಗಾಗಿ ಸ್ಪಂದನಾ ಕೊನೆಯುಸಿರೆಳೆದ ಸುದ್ದಿ ಚಿತ್ರರಂಗ ಮಾತ್ರವಲ್ಲ, ಕನ್ನಡಿಗರ ಆಘಾತಕ್ಕೆ ಕಾರಣವಾಗಿತ್ತು. ನಿನ್ನೆ (ಮಂಗಳವಾರ) ರಾತ್ರಿ ಪಾರ್ಥಿವ ಶರೀರವನ್ನು ಬ್ಯಾಂಕಾಕ್​ನಿಂದ ವಿಮಾನದ ಮೂಲಕ ಬೆಂಗಳೂರಿಗೆ ತರಲಾಗಿತ್ತು. ಮಲ್ಲೇಶ್ವರಂನ ನಿವಾಸದಲ್ಲಿ ಇಂದು ಮುಂಜಾನೆ 6 ಗಂಟೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂತ್ಯಸಂಸ್ಕಾರ ನೆರವೇರಿದ್ದು, ಪಂಚಭೂತಗಳಲ್ಲಿ ಸ್ಪಂದನಾ ಲೀನರಾಗಿದ್ದಾರೆ.ಇಂದು ಸಂಜೆ 5 ಗಂಟೆಗೆ ವಿಜಯ್ ರಾಘವೇಂದ್ರ ಅವರ ಪತ್ನಿ […]