ಕೋವಿಡ್ ವಿಚಾರದಲ್ಲಿ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟರೆ, 24 ಗಂಟೆಯೊಳಗೆ ಅಮಾನತು: ಶಾಸಕ ರಘುಪತಿ ಭಟ್ 

ಉಡುಪಿ: ಕೋವಿಡ್ ವಿಚಾರದಲ್ಲಿ ಯಾವುದಾದರೂ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಅಥವಾ ಸೀಲ್ ಡೌನ್ ತೆಗೆಯಲು ಹಣ ಪಡೆದಿದ್ದಾರೆ. ಜಿಲ್ಲೆಯಲ್ಲಿ ಐದು ಬಿಜೆಪಿ ಶಾಸಕರು ಇದ್ದಾರೆ. ಅವರಿಗೆ ಮಾಹಿತಿ ನೀಡಿ. ಅದು ಎಷ್ಟೇ ದೊಡ್ಡ ಅಧಿಕಾರಿ ಆಗಿದ್ದರೂ ಅವರನ್ನು 24 ಗಂಟೆಯೊಳಗೆ ಅಮಾನತು ಮಾಡುತ್ತೇವೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು. ಉಡುಪಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೋವಿಡ್ ಪರೀಕ್ಷೆಯಲ್ಲಿ ಭಾರೀ ಗೋಲ್ ಮಾಲ್ ಆಗುತ್ತಿದೆ. ಹಣ ಮಾಡಲು ಕೋವಿಡ್ ಸಂಖ್ಯೆ ಹೆಚ್ಚಿಸುತ್ತಿದ್ದಾರೆ […]