ಮನೆಯಿಂದಲೇ ಮತದಾನಕ್ಕೆ ಒಲ್ಲೆ ಎಂದರು: ಮತಗಟ್ಟೆಗೆ ಬರಲು ಉತ್ಸಾಹ ತೋರುತ್ತಿದ್ದಾರೆ ಹಿರಿಯನಾಗರಿಕರು/ವಿಕಲಚೇತನರು

ಉಡುಪಿ: ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತ ಚಲಾಯಿಸಲು ವಿಶೇಷ ಸೌಲಭ್ಯ ಒದಗಿಸಿದೆ. ಆದರೆ ಜಿಲ್ಲೆಯ ಬಹುತೇಕ ವಿಕಲಚೇತನರು ಮತ್ತು ಹಿರಿಯ ನಾಗರೀಕರು ಮನೆಯಿಂದಲೇ ಮತದಾನ ಮಾಡುವ ಸೌಲಭ್ಯವನ್ನು ಬಳಸಿಕೊಳ್ಳದೇ, ಮತದಾನದ ದಿನದಂದು ಮತಗಟ್ಟೆಗೆ ಖುದ್ದು ತೆರಳಿ ತಮ್ಮ ಮತದಾನದ ಹಕ್ಕು ಚಲಾಯಿಸಲು ಉತ್ಸಾಹ ತೋರಿದ್ದಾರೆ. ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟ, ಬೈಂದೂರು ವಿಧಾನಸಭಾ ಕ್ಷೇತ್ರದ 5864 ಹಿರಿಯ […]

ಅಂಗವಿಕಲ ಮಗಳನ್ನು ಮರೆತ ಕುಟುಂಬ: ಮತ್ತೆ ಅಪತ್ಭಾಂಧವರಾದ ವಿಶು ಶೆಟ್ಟಿ

ಉಡುಪಿ : ತಾಯಿ ಅನಾರೋಗ್ಯ ಪೀಡಿತೆ ಎಂದು ಆಕೆಯ ಅಂಗವಿಕಲೆ ಮಗಳನ್ನು ಹೆಬ್ರಿ ರಾಘವೇಂದ್ರ ಆಸ್ಪತ್ರೆಯಲ್ಲಿ ದಾಖಲಿಸಿ ಕೈ ತೊಳೆದುಕೊಂಡ ಶಂಕರನಾರಾಯಣ ಮೂಲದ ಕುಟುಂಬವೊಂದು ಇದೀಗ ಜಾಣ ಕುರುಡು ತೋರಿ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವ ವಿದ್ಯಮಾನ ನಡೆದಿದ್ದು, ಆಪದ್ಭಾಂಧವ ವಿಶು ಶೆಟ್ಟಿ ಅವರು ಇದೀಗ ಎರಡನೇ ಬಾರಿಗೆ ಸ್ಪಂದಿಸಿ ಯುವತಿಯನ್ನು ಕಾರ್ಕಳ ಆಯ್ಯಪ್ಪನಗರದಲ್ಲಿರುವ ವಿಜೇತ ವಿಶೇಷ ಶಾಲೆ ಮತ್ತು ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದ್ದಾರೆ. ಭಿನ್ನ ಸಾಮರ್ಥ್ಯ ಅಂಗವಿಕಲೆ ಯುವತಿಯ ಬಗ್ಗೆ ಕುಟುಂದವರಿಗೆ ಪೋನ್ ಮೂಲಕ ಸಂಪರ್ಕಿಸಿದರೆ ಯುವತಿಗೂ […]

ಸಾಮಾಜಿಕ ಅಧಿಕಾರಿತ ಶಿಬಿರ ಉದ್ಘಾಟನೆ: ವಿಕಲಚೇತನರಿಗೆ ಸಲಕರಣೆ ವಿತರಣೆ

ಉಡುಪಿ: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ದಿವ್ಯಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆಯ, ಆರ್ಟಿಫಿಷಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಶನ್ ಆಫ್ ಇಂಡಿಯಾದ ವತಿಯಿಂದ ಉಡುಪಿಯಲ್ಲಿ ನಡೆದ ಸಾಮಾಜಿಕ ಅಧಿಕಾರಿತ ಶಿಬಿರವನ್ನು ಶನಿವಾರದಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿಶೇಷ ಯೋಜನೆಯಡಿಯಲ್ಲಿ, ಜಿಲ್ಲೆಯ ವಿಕಲಚೇತನರಿಗೆ ಉಚಿತ ಸಾಧನ, ಸಲಕರಣೆಗಳನ್ನು ವಿತರಿಸಿದರು. ಉಡುಪಿ ಜಿಲ್ಲೆಯಾದ್ಯಂತ ನಡೆಸಿದ ವೈದ್ಯಕೀಯ ತಪಾಸಣಾ ಶಿಬಿರಗಳ ಒಟ್ಟು 1390 […]

ಫೆ.11 ರಂದು ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣೆ

ಉಡುಪಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ ಹಾಗೂ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಮ್ಕೋ) ಇವರ ಸಹಯೋಗದಲ್ಲಿ ಸಾಮಾಜಿಕ ಅಧಿಕಾರಿತಾ ಶಿಬಿರ ಕೇಂದ್ರ ಸರ್ಕಾರದ ವಿಶೇಷ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಕಾರ್ಯಕ್ರಮವು ಫೆಬ್ರವರಿ 11 ರಂದು ಬೆಳಗ್ಗೆ 11.30 ಕ್ಕೆ ನಗರದ ಮಿಷನ್ ಕಾಂಪೌಂಡ್ ಬೆಸೆಲ್ ಮಿಷನರೀಸ್ ಮೆಮೋರಿಯಲ್ ಆಡಿಟೋರಿಯಮ್ ನಲ್ಲಿ ನಡೆಯಲಿದೆ.

ಡಿ. 29 ರಂದು ದಿವ್ಯಾಂಗರಿಗಾಗಿ ಉದ್ಯೋಗ ಮೇಳ; ಆರೋಗ್ಯ ಮಾಹಿತಿ ಕಾರ್ಯಕ್ರಮ

  ಉಡುಪಿ: ಶ್ರೀ ಕೃಷ್ಣಾಪುರ ಮಠದಆಶೀರ್ವಾದದೊಂದಿಗೆ ಚೋಸನ್ ಜನರೇಷನ್ ಚಾರಿಟೇಬಲ್ ಟ್ರಸ್ಟ್ ,ಆದಿತ್ಯ ಟ್ರಸ್ಟ್, ರೋಟರಿ ಕ್ಲಬ್ ಕಲ್ಯಾಣಪುರ,ರಾಷ್ಟ್ರೀಯ ಪದವಿ ಪೂರ್ವ ವಿದ್ಯಾರ್ಥಿಗಳ ಪೋಷಕರ ಮತ್ತು ಶಿಕ್ಷಕರ ಸಂಘ ಹಾಗೂ ಕೊಡವೂರು ದಿವ್ಯಾಂಗ ರಕ್ಷಣಾ ಸಮಿತಿಇವರ ಸಂಯುಕ್ತ ಆಶ್ರಯದಲ್ಲಿ ದಿವ್ಯಾಂಗರಿಗೆ ಉದ್ಯೋಗ ಮೇಳ ಹಾಗೂ ಆರೋಗ್ಯ ಮಾಹಿತಿ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮವು ಡಿ. 29 ರಂದು ರಾಜಾಂಗಣದಲ್ಲಿ ಬೆಳಿಗ್ಗೆ 9.00 ರಿಂದ ಸಂಜೆ 3.00 ರ ವರೆಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.