ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ

ಬೆಂಗಳೂರು: ಶುಕ್ರವಾರದಂದು ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಎಂಪಿ ಅವರನ್ನು ನೇಮಿಸಲಾಗಿದೆ. ರವಿ ಕುಮಾರ್ ಎಂ.ಆರ್. ಅವರನ್ನು ವರ್ಗಾಯಿಸಲಾಗಿದೆ. 2013ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಮುಲೈ ಮುಹಿಲನ್ ಎಂಪಿ ಬೆಂಗಳೂರಿನಲ್ಲಿರುವ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ರವಿಕುಮಾರ್ ಎಂ ಆರ್ ಅವರು 2022, ಅಕ್ಟೋಬರ್ 31 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ದಕ್ಷಿಣ […]

ವಾಮಂಜೂರು: ಜನರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ; ಅಣಬೆ ಫ್ಯಾಕ್ಟರಿ ಮುಚ್ಚಲು ಆದೇಶ

ವಾಮಂಜೂರು: ಇಲ್ಲಿನ ಆಶ್ರಯ ನಗರದ ಬಳಿ ಇರುವ ಅಣಬೆ ಫ್ಯಾಕ್ಟರಿಯಿಂದಾಗಿ ಪರಿಸರ ಮಾಲಿನ್ಯವಾಗುತ್ತಿದ್ದು ಜನರಿಗೆ ಆರೋಗ್ಯ ಸಮಸ್ಯೆಗಳು ಬರುತ್ತಿವೆ ಎಂದು ಸ್ಥಳೀಯರು ನಡೆಸುತ್ತಿದ್ದ ಪ್ರತಿಭಟನೆಗೆ ತಾರ್ಕಿಕ ಅಂತ್ಯ ದೊರೆತಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಣಬೆ ಫ್ಯಾಕ್ಟರಿ ಘಟಕವನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ. ಅಣಬೆ ಫ್ಯಾಕ್ಟರಿಯಿಂದಾಗಿ ದುರ್ವಾಸನೆಯಿಂದ ಅನಾರೋಗ್ಯಕರ ವಾತಾವರಣ ನಿರ್ಮಾಣವಾಗಿದ್ದು, ಬದುಕಲು ಸಾಧ್ಯವಾಗದಂತಹ ಪರಿಸ್ಥಿತಿ ಉಂಟಾಗಿದೆ. ಶ್ವಾಸಕೋಶ ತೊಂದರೆ, ತಲೆನೋವು, ವಾಂತಿ ಸೇರಿದಂತೆ ಹಲವು ಸಮಸ್ಯೆಗಳನ್ನು ಜನರು ಎದುರಿಸುವಂತಾಗಿದೆ. ಹಾಗಾಗಿ […]

ಸುಳ್ಯ: ಸಚಿವದ್ವಯರಿಂದ ಅತಿವೃಷ್ಟಿ ಪೀಡಿತ ಪ್ರದೇಶದ ಮನೆಗಳ ಪರಿಶೀಲನೆ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ತೋಡಿಕಾನ, ದೊಡ್ಡ ಕುಮೇರಿ, ಮತ್ತು ಕಲ್ಲುಗುಂಡಿ ಪ್ರದೇಶದ ಮನೆಗಳಿಗೆ ಮೀನುಗಾರಿಕಾ ಸಚಿವ ಎಸ್ ಅಂಗಾರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿ ಪ್ರದೇಶಗಳ ಸ್ಥಿತಿಗತಿ ನಿರೀಕ್ಷಿಸಿ ಹಾನಿಗೊಳಗಾದ ಮನೆಗಳನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಜೊತೆಗಿದ್ದರು.