ಡಿ.ಕೆ.ಸುರೇಶ್ ‘ಪ್ರತ್ಯೇಕ ದೇಶ’ ಹೇಳಿಕೆ: ಕ್ರಮಕ್ಕೆ ಒತ್ತಾಯಿಸಿದ ಪ್ರಹ್ಲಾದ್ ಜೋಶಿ

ನವದೆಹಲಿ: ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಶುಕ್ರವಾರ ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರ “ಪ್ರತ್ಯೇಕ ದೇಶದ ಬೇಡಿಕೆ” ಹೇಳಿಕೆಯನ್ನು ಪ್ರಸ್ತಾಪಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು, ಕೆಳಮನೆಯಲ್ಲಿ ಮಾತನಾಡಿದ ಜೋಶಿ, ಲೋಕಸಭಾ ಸಂಸದರಾಗಿ ಇದು ಅವರ ಪ್ರಮಾಣ ವಚನದ ಉಲ್ಲಂಘನೆಯಾಗಿದೆ ಎಂದಿದ್ದಾರೆ. “ನಾನು ಸೋನಿಯಾ ಗಾಂಧಿಯವರಿಂದ ಕ್ಷಮೆಯಾಚನೆ ಮತ್ತು ಕ್ರಮಕ್ಕೆ ಒತ್ತಾಯಿಸುತ್ತೇನೆ. ಇದು ಅವರ (ಸಂಸದರಾಗಿ) ಪ್ರಮಾಣ ವಚನದ ಉಲ್ಲಂಘನೆಯಾಗಿದೆ. ವಿಷಯವನ್ನು ನೈತಿಕ ಸಮಿತಿಗೆ ಕಳುಹಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಕಾಂಗ್ರೆಸ್ ಕ್ರಮ ತೆಗೆದುಕೊಳ್ಳಬೇಕು. ಅವರು ತೆಗೆದುಕೊಳದಿದ್ದರೆ ದೇಶದ […]