ದೊಡ್ಡಣಗುಡ್ಡೆ: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಕಿಕ್ಕಿರಿದ ಭಕ್ತಸಮೂಹದೊಂದಿಗೆ ವರಮಹಾಲಕ್ಷ್ಮಿ ವೃತ ಪೂಜೆ ಸಂಪನ್ನ
![](https://udupixpress.com/wp-content/uploads/2022/08/varalaxmi-vrita.png)
ಉಡುಪಿ: ಕರ್ನಾಟಕದಲ್ಲಿ ಪ್ರಥಮ ಹಾಗೂ ಭಾರತದಲ್ಲಿ ದ್ವಿತೀಯ ಸನ್ನಿಧಾನವೆನಿಸಿದ ಉಡುಪಿ ದೊಡ್ಡಣಗುಡ್ಡೆಯ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಶ್ರೀ ಕುಬೇರ ಚಿತ್ರಲೇಖಾ ಸಹಿತವಾದ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ವರಮಹಾಲಕ್ಷ್ಮಿ ವೃತ ಪೂಜೆಯು ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜೀ ಮಾರ್ಗದರ್ಶನದಲ್ಲಿ ಹಾಗೂ ವೇದಮೂರ್ತಿ ಕೃಷ್ಣಮೂರ್ತಿ ತಂತ್ರಿಗಳ ನೇತ್ರತ್ವದಲ್ಲಿ ನೆರವೇರಿತು. ಶ್ರಾವಣ ಮಾಸದ ಶುಕ್ಲಪಕ್ಷದ ಹುಣ್ಣಿಮೆಯ ಶುಕ್ರವಾರದಂದು ಸಂಜೆ ನೆರವೇರಿದ ಈ ಪೂಜೆಯಲ್ಲಿ ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ದೀಪ ಪ್ರಜ್ವಲಿಸಿ ವರಮಹಾಲಕ್ಷ್ಮಿ ವೃತ ಪೂಜೆಗೆ […]