ಕೋಟ ಜೋಡಿ ಕೊಲೆ ಪ್ರಕರಣ: ಜಿ.ಪಂ ಸದಸ್ಯ ಸೇರಿದಂತೆ ಆರು ಮಂದಿ ಅರೆಸ್ಟ್

ಕುಂದಾಪುರ: ಇಡೀ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ ಕೋಟ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ.ಪಂ ಸದಸ್ಯ ರಾಘವೇಂದ್ರ ಕಾಂಚನ್ ಬಾರಿಕೆರಿ ಸೇರಿದಂತೆ ಆರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಪ್ರಮುಖ ಎಂಟು ಆರೋಪಿಗಳ ಪೈಕಿ ಆರು ಜನರನ್ನು ಬಂಧಿಸಿರುವ ಉಡುಪಿ ಎಸ್‌ಪಿ ಹಾಗೂ ಡಿಸಿಐಬಿ ಪೊಲೀಸರು ಶುಕ್ರವಾರ ಸಂಜೆ ಆರೋಪಿಗಳನ್ನು ಕುಂದಾಪುರ ಹೆಚ್ಚುವರಿ ಜೆಎಮ್‌ಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಧೀಶ ಶ್ರೀಕಾಂತ್ ಹೆಚ್ಚಿನ ವಿಚಾರಣೆಗಾಗಿ ಫೆ.೧೫ರ ತನಕ ಅಂದರೆ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ. […]