ಜಿಲ್ಲಾ ಮಟ್ಟದ ಯುವ ವಿದ್ಯಾರ್ಥಿ ಸಮ್ಮೇಳನ ಸಂಪನ್ನ

ಉಡುಪಿ: ಶುಕ್ರವಾರ ಉಡುಪಿ ಚರ್ಚಿನಲ್ಲಿ, ನೆಹರೂ ಯುವಕೇಂದ್ರ ಸಂಘಟನೆ ಉಡುಪಿ ಜಿಲ್ಲೆ, ಯುವ ವಿದ್ಯಾರ್ಥಿ ಸಂಚಲನ, ಉಡುಪಿ ಧರ್ಮಕ್ಷೇತ್ರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಯುವ ವಿದ್ಯಾರ್ಥಿ ಸಮ್ಮೇಳನವನ್ನು ಏರ್ಪಡಿಸಲಾಗಿತ್ತು. ಕರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೂರ್ಮಾ ರಾವ್, ಸಮಾಜದಲ್ಲಿ ಬದುಕುವ ಪ್ರತಿಯೋರ್ವನೂ ಮೊದಲು ಮಾನವನಾಗುವತ್ತ ಕಾರ್ಯಪ್ರವೃತ್ತನಾದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಮನುಷ್ಯ ಸದಾ ಕ್ರಿಯಾಶೀಲನಾಗಿರಲು ಬಯಸುತ್ತಾನೆ. ಯಾವುದಾದರೂ ಚಟುವಟಿಕೆಯಲ್ಲಿ ತನ್ನನ್ನೇ ತಾನು ತೊಡಗಿಸಿಕೊಳ್ಳುತ್ತಾನೆ. ಇದು ಮನುಷ್ಯರಲ್ಲಿ ಅಂತರ್ಗತವಾಗಿರುವ ಗುಣ. ವಿದ್ಯಾರ್ಥಿಗಳು ತಮ್ಮ […]