ಗುರಿ ಸಾಧನೆಗೆ ಪ್ರಯತ್ನ ನಿರಂತರವಾಗಿರಲಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಯನ್ನು ಸಾಧಿಸಲು ಕಠಿಣ ಶ್ರಮ ಮತ್ತು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ನಂತರ ವಿದ್ಯಾರ್ಥಿಗಳು ತಾವು ನಿಗಧಿಪಡಿಸಿಕೊಂಡಿರುವ ನಿಗಧಿತ ಗುರಿಯನ್ನು, ಯಾವುದೇ ಸಂದರ್ಭದಲ್ಲೂ ಕೈಬಿಡದೆ ಅದರ ಸಾಧನೆಗೆ ಪ್ರಯತ್ನಿಸಬೇಕು. ನಿರಂತರವಾಗಿ ಅಧ್ಯಯನ ಹಾಗೂ ಗ್ರಂಥಾಲಯಗಳಿಗೆ ಭೇಟಿ ನೀಡಿ, […]