ಚೆಸ್ ಪಂದ್ಯಾಟ: ಎಕ್ಸಲೆಂಟ್ ಪಿಯು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಂದಾಪುರ: 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯು ಅಕ್ಟೋಬರ್ 7 ಮತ್ತು 8 ರಂದು ಶ್ರೀ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಬಿಡದಿ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು, ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮಾನಸ ದೇವಾಡಿಗ ಮತ್ತು ನಿಹಾಲ್ ಎನ್ ಶೆಟ್ಟಿ ಉಡುಪಿ ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ ಹಾಗೂ ಚತುರ್ಥ ಸ್ಥಾನಿ ವಿಜೇತರಾಗಿ, ಓಡಿಸ್ಸಾ ರಾಜ್ಯದ […]

ಶಿವಮೊಗ್ಗ ಮಕ್ಕಳ ದಸರಾ ಕರಾಟೆ ಪಂದ್ಯಾವಳಿಯಲ್ಲಿ ಎಕ್ಸಲೆಂಟ್ ಕಾಲೇಜು ವಿದ್ಯಾರ್ಥಿಗಳ ಅಮೋಘ ಪ್ರದರ್ಶನ

ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆ, ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್, ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಪ್ರಾಯೋಜಕತ್ವದಲ್ಲಿ ಶಿವಮೊಗ್ಗ ಮಕ್ಕಳ ದಸರಾ 2022 ಅಂಗವಾಗಿ 2ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯು ನೆಹರು ಒಳಾಂಗಣ ಕ್ರೀಡಾಂಗಣ ಶಿವಮೊಗ್ಗ ಇಲ್ಲಿ ಸೆಪ್ಪಂಬರ್ 27 ರಂದು ನಡೆದಿದ್ದು, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಘ್ನೇಶ್ ನಾಯಕ್ 45 ಕೆಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ಮೊಹಮ್ಮದ್ ಅನೀಸ್ 55ಕೆಜಿ ಪುರುಷರ ವಿಭಾಗದಲ್ಲಿ […]

ವಾಲಿಬಾಲ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಕಾಲೇಜಿನ ಅನುಜ್ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಅನುಜ್ ಕುಮಾರ್ ಜೆ.ಎಸ್ ಇವರು ಕುಂದಾಪುರ ತಾಲ್ಲೂಕು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಮತ್ತು ಶಿಕ್ಷಕೇತರರು ಅಭಿನಂದಿಸಿದ್ದಾರೆ.

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕುಂದಾಪುರ: ಕುಂದಾಪುರ ತಾಲ್ಲೂಕಿನ ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಇವರು ಪಂದ್ಯವನ್ನುದ್ಘಾಟಿಸಿ ಮಾತನಾಡಿ, ಪಾಠದ ಜೊತೆಗೆ ಆಟವೂ ಕೂಡ ಅಷ್ಟೇ ಮುಖ್ಯವಾಗಿದೆ. ವಿದ್ಯಾರ್ಥಿಗಳು ಲವಲವಿಕೆಯಿಂದ ಭಾಗವಹಿಸಿದಾಗ ಆಟಕ್ಕೆ ಕಳೆಬರುತ್ತದೆ. ಸ್ಪರ್ಧಾಳುಗಳು ಆಟದ ಕೊನೆಯವರೆಗೂ ತಂಡದ ಉತ್ಸಾಹವನ್ನು ಕಳೆದುಕೊಳ್ಳದೆ ಹುರುಪಿನೊಂದಿಗೆ ಪ್ರೇಕ್ಷಕರನ್ನು ರೋಮಾಂಚನಗೊಳಿಸುವಂತೆ ಆಟವಾಡಬೇಕೆಂದು ಹೇಳುತ್ತಾ, ಸಂಸ್ಥೆಯ ಅಚ್ಚುಕಟ್ಟಾದ ಕ್ರೀಡಾ ಆಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯ […]

ಶಿಕ್ಷಣ ಸಂಸ್ಥೆಗಳು ಸಮಾಜ ಕಟ್ಟುವ ದೇಗುಲವಿದ್ದಂತೆ: ಪ್ರೊ.ಎಂ. ಬಾಲಕೃಷ್ಣ ಶೆಟ್ಟಿ

ಕುಂದಾಪುರ: ಗುರು ಪರಂಪರೆಯಲ್ಲಿ ಗುರುವು ಒಳ್ಳೆಯ ಶಿಷ್ಯನನ್ನು ಪಡೆದಾಗ ಮಾತ್ರ ಶಿಕ್ಷಕ ಧನ್ಯನಾಗುತ್ತಾನೆ. ಸಮಾಜದಲ್ಲಿ ಗುರುವಿಗೆ ಮನ್ನಣೆಯಿದ್ದು, ಶಿಕ್ಷಕರು ತಾಯಿಗಿಂತ ಶ್ರೇಷ್ಠರು. ಈ ನಿಟ್ಟಿನಲ್ಲಿ ಶಿಕ್ಷಣ ಸಂಸ್ಥೆಗಳು ಸಮಾಜ ಕಟ್ಟುವ ದೇಗುಲವಿದ್ದಂತೆ ಎಂದು ಮಂಗಳೂರಿನ ರಾಮಕೃಷ್ಣ ಎಜುಕೇಶನಲ್ ಸೊಸೈಟಿಯ ಆಡಳಿತಾಧಿಕಾರಿ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ ಹೇಳಿದರು. ಅವರು ಸೆ. 5 ರಂದು ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜ್ ಮತ್ತು ಸ್ಕೂಲ್‌ನ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಡಾ. ಸರ್ವಪಳ್ಳಿ ರಾಧಾಕೃಷ್ಣ ಅವರ ಭಾವಚಿತ್ರಕ್ಕೆ ಪುಷ್ಪ […]