ಎಕ್ಸ್ಪರ್ಟ್ ಪದವಿ ಪೂರ್ವಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಮಂಗಳೂರು: ಉತ್ತಮ ಏಕಾಗ್ರತೆಗಾಗಿ ವಿದ್ಯಾರ್ಥಿಗಳು ಯೋಗ ಮತ್ತು ಧ್ಯಾನದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ಸಕಾರಾತ್ಮಕ ಮನಸ್ಸಿನ ಆರೋಗ್ಯವಂತ ವ್ಯಕ್ತಿಯು ಸಮಾಜಕ್ಕೆ ಹೆಚ್ಚಿನಕೊಡುಗೆ ನೀಡಬಲ್ಲ. ಯೋಗ ಇಂದಿನ ಅಗತ್ಯಗಳಲ್ಲಿ ಒಂದು. ಆಧುನಿಕ ಜೀವನಶೈಲಿಯಿಂದಾಗಿ ಒತ್ತಡ, ಖಿನ್ನತೆ, ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚಾಗುತ್ತಿದ್ದುಇದಕ್ಕೆ ಅಷ್ಟಾಂಗ ಯೋಗಗಳು ಸಹಕಾರಿ. ಆಧ್ಯಾತ್ಮಿಕ, ಮಾನಸಿಕ ಮತ್ತು ದೈಹಿಕ ಶಾಂತಿ ಸಂಯಮಗಳನ್ನು ಕಾಯ್ದುಕೊಳ್ಳಲು ಸಾಧಿಸಲಾಗುವ ಉನ್ನತ ಜೀವನ ಶಿಕ್ಷಣವೇ ಯೋಗ.ಯೋಗ ಆರೋಗ್ಯವರ್ಧಕ ಹಾಗೂ ರೋಗ ನಿವಾರಕ ಎಂದು ದಕ್ಷಿಣಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ, ಅಂತಾರಾಷ್ಟ್ರೀಯ ಯೋಗ […]

ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ 25 ವಿದ್ಯಾರ್ಥಿಗಳಿಗೆ 590 ಕ್ಕಿಂತ ಅಧಿಕ ಅಂಕ: ಶೇ.98.30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ವಳಚ್ಚಿಲ್ ಹಾಗೂ ಕೊಡಿಯಾಲ್‌ಬೈಲ್‌ನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ 25 ವಿದ್ಯಾರ್ಥಿಗಳು ಒಟ್ಟು 600 ಅಂಕಗಳಲ್ಲಿ 590 ಕ್ಕಿಂತ ಅಧಿಕ ಅಂಕಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಒಟ್ಟು ಪರೀಕ್ಷೆ ಬರೆದ 1352 ವಿದ್ಯಾರ್ಥಿಗಳಲ್ಲಿ 1328 ವಿದ್ಯಾರ್ಥಿಗಳು ಅಂದರೆ ಶೇ.98.27ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಪದವಿ ಪೂರ್ವ ಶಿಕ್ಷಣದಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ. 580ಕ್ಕಿಂತ ಅಧಿಕ […]

ಎಕ್ಸ್‌ಪರ್ಟ್ ಪಿಯು ಕಾಲೇಜು ವಳಚ್ಚಿಲ್‌ ಕ್ಯಾಂಪಸ್‌ಗೆ ಗ್ರೀನ್ ಅವಾರ್ಡ್

ಮಂಗಳೂರು: ಜಿಐಬಿ ಇಂಡಿಯಾ ನೀಡುವ ಗ್ರೀನ್ ಅವಾರ್ಡ್ ಅನ್ನು ಮಂಗಳೂರಿನ ವಳಚ್ಚಿಲ್‌ನಲ್ಲಿರುವ ಎಕ್ಸ್‌ಪರ್ಟ್ ಪದವಿ ಪೂರ್ವ ಕಾಲೇಜಿನ ಕ್ಯಾಂಪಸ್ ಪಡೆದುಕೊಂಡಿದೆ. ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಹಾಗೂ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್.ನಾಯಕ್ ಅವರು ಪುರಸ್ಕಾರವನ್ನು ಪಡೆದುಕೊಂಡರು. ಪ್ರಶಸ್ತಿಗಾಗಿ ವಿಶ್ವದ ನಾನಾ ಭಾಗದ 1000ಕ್ಕೂ ಅಧಿಕ ಸಂಸ್ಥೆಗಳು ನಾಮನಿರ್ದೇಶನಗೊಂಡಿದ್ದವು. ಪರಿಣಿತ ತೀರ್ಪುಗಾರರ ತಂಡವು ಸಮಗ್ರ ಅಧ್ಯಯನ ನಡೆಸಿ ಅಂತಿಮ ಹಂತದಲ್ಲಿ 20 ಸಂಸ್ಥೆಗಳಿಗೆ ಗ್ರೀನ್ ಪುರಸ್ಕಾರ ನೀಡಿ ಗೌರವಿಸಿದೆ. ಇದರಲ್ಲಿ […]