ಮತ್ಸ್ಯ ಸಂಪದ ಯೋಜನೆ: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ 2022-23 ನೇ ಸಾಲಿಗೆ ನೀಡಲಾದ ಗುರಿಗಳಿಗೆ ತಕ್ಕಂತೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅರ್ಹ ಆಸಕ್ತ ಫಲಾನುಭವಿಗಳಿಂದ ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿಗೆ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಅಲಂಕಾರಿಕ ಮೀನು/ಅಕ್ವೇರಿಯಂ ಮಾರಾಟ ಮಳಿಗೆ ಸೇರಿದಂತೆ ಚಿಲ್ಲರೆ ಮೀನು ಮಾರಾಟ ಮಳಿಗೆಗಳ ನಿರ್ಮಾಣ , ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ದಿ ಮತ್ತಿತರ […]

ಕೇಂದ್ರದಿಂದ ನಾಡದೋಣಿ ಮೀನುಗಾರಿಕೆಗೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮಎಣ್ಣೆ ಬಿಡುಗಡೆ: ಯಶ್ ಪಾಲ್ ಸುವರ್ಣ ಅಭಿನಂದನೆ

ಉಡುಪಿ: ರಾಜ್ಯದ ಕರಾವಳಿ ಭಾಗದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಮೀನುಗಾರಿಕೆ ನಡೆಸಲು ಸಕಾಲದಲ್ಲಿ ಸೀಮೆ ಎಣ್ಣೆ ಹಂಚಿಕೆಯಾಗದೇ ಎದುರಿಸುತ್ತಿದ್ದ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಸರಕಾರ 2022-23 ನೇ ಸಾಲಿನ 30 ಲಕ್ಷ ಲೀಟರ್ ಹೆಚ್ಚುವರಿ ಸೀಮೆ ಎಣ್ಣೆಯನ್ನು ಬಿಡುಗಡೆಗೊಳಿಸಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಎ. ಸುವರ್ಣ ತಿಳಿಸಿದ್ದಾರೆ. ಜುಲೈ ತಿಂಗಳಿನಲ್ಲಿ ಕರ್ನಾಟಕ ಕರಾವಳಿ […]

ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದನೆ: ಸಚಿವೆ ಮನವಿ ಮೇರೆಗೆ ರಾಜ್ಯಕ್ಕೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮೆ ಎಣ್ಣೆ ಬಿಡುಗಡೆ ಮಾಡಿದ ಕೇಂದ್ರ  

  ಉಡುಪಿ/ ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ ವಾಗಿದ್ದು, ಈ ಕುರಿತು ಕೇಂದ್ರ ಸರಕಾರದ ಗಮನವನ್ನು ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆ ಮಾಡಿ ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಪಾಡಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟವು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರಿಗೆ ಮನವಿಯನ್ನು ಸಲ್ಲಿಸಿದ್ದು, ಕರಾವಳಿಯ ಮೀನುಗಾರರ ಮನವಿಯನ್ನು ಕೇಂದ್ರ ಸಚಿವೆ, […]

ಮೀನುಗಾರಿಕಾ ಸೀಮೆಎಣ್ಣೆಗೆ ಅರ್ಜಿ ಸಲ್ಲಿಸಿದವರಿಗೆ ಸೆ 13-14 ರಂದು ಜಂಟಿ ತಪಾಸಣೆ

ಉಡುಪಿ: ಆಹಾರ, ಕಂದಾಯ ಮತ್ತು ಮೀನುಗಾರಿಕಾ ಇಲಾಖೆಗಳ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಉಡುಪಿ ತಾಲೂಕಿನಲ್ಲಿ ಮೀನುಗಾರಿಕಾ ಸೀಮೆಎಣ್ಣೆ ಹೊಸತು ಮತ್ತು ನವೀಕರಣಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಸೆಪ್ಟಂಬರ್ 13 ರಂದು ಬೆಳಗ್ಗೆ 9.30 ಕ್ಕೆ ಪಡುಬಿದ್ರಿಯ ಸಾಗರ ವಿದ್ಯಾ ಮಂದಿರ ಶಾಲೆ ಬಳಿ ಹಾಗೂ ಮಧ್ಯಾಹ್ನ 2.30 ಕ್ಕೆ ಉಚ್ಚಿಲ ಮೊಗವೀರ ಸಭಾಭವನದ ಹತ್ತಿರ ಮತ್ತು ಸೆ. 14 ರಂದು ಬೆಳಗ್ಗೆ 9.30 ಕ್ಕೆ ಮಲ್ಪೆ ಟೆಗ್ಮಾದ ಬಳಿ ಜಂಟಿ ತಪಾಸಣೆಯನ್ನು ನಡೆಸಲಾಗುವುದು. ಹೊಸ ರಹದಾರಿ ಕೋರಿ ಅರ್ಜಿ […]

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಗೆ ಹಾಗೂ ನೀಲಿಕ್ರಾಂತಿ ಯೋಜನೆಯಡಿ 2018-19 ಮತ್ತು 2019-20 ರಲ್ಲಿ ಬಾಕಿ ಉಳಿದಿರುವ ಘಟಕಗಳಿಗಾಗಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿಗೆ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ಧಿ ಮತ್ತು ಮೀನುಗಾರಿಕೆ ನಿರ್ವಹಣೆ ಹಾಗೂ ನಿಯಂತ್ರಣ ವಿಧಿಗಳ ಅಭಿವೃದ್ಧಿ […]