ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ

ಕುಂದಾಪುರ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವದ ಬುಧವಾರ ವಿಜೃಂಭಣೆಯಿಂದ ಜರಗಿತು. ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಅವರ ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ಶ್ರೀಪಾದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ರಥೋತ್ಸವದ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ನಡೆಯಿತು. ಬ್ರಹ್ಮಬೆಳಿಗ್ಗೆ ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ […]