ಕೋಟೇಶ್ವರ ಗಾಣಿಗ ಯುವ ಸಂಘಟನೆ: ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ, ಕೊಡೆ ವಿತರಣೆ, ಸಾಧಕರಿಗೆ ಸನ್ಮಾನ

ಕುಂದಾಪುರ:ಯುವ ಜನತೆ,ವಿದ್ಯಾರ್ಥಿಗಳು ಸಾಧನೆ ಮಾಡಬೇಕಾದರೆ ಎಲ್ಲಾ ಅಡೆತಡೆಗಳನ್ನು ಮೀರಿ ಸಾಗಬೇಕು.ಆಗ ಸಾಧನೆ ಮಾಡಲು ಸಾಧ್ಯವಾಗುತ್ತದೆ.ನಾವು ಸಾಧಿಸುವ ಯೋಜನೆ ಮಾಡುವುದು ಎಲ್ಲಾ ಮುಗಿದ ಮೇಲೆ ಹಾಗಾಗಬಾರದು, ಮೊದಲೇ ಯೋಚಿಸಿ ಯಶಸ್ವಿನ ಕಡೆಗೆ ಸಾಗಬೇಕು ಎಂದು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‍ನ ಸಂಘಟನಾ ಕಾರ್ಯದರ್ಶಿ ನರೇಂದ್ರ ಕುಮಾರ ಕೋಟ ಹೇಳಿದರು. ಅವರು ಭಾನುವಾರ ಗಾಣಿಗ ಯುವ ಸಂಘಟನೆ, ಕೋಟೇಶ್ವರ ಘಟಕ, ಗಾಣಿಗ ಮಹಿಳಾ ಸಂಘಟನೆ, ಕೋಟೇಶ್ವರ ಘಟಕದ ಆಶ್ರಯದಲ್ಲಿ ಬೀಜಾಡಿ ಮಿತ್ರಸೌಧದಲ್ಲಿ ನಡೆದ ಗಾಣಿಗ ಸಮಾಜದ ಕೋಟೇಶ್ವರ ಘಟಕ […]