ಮಾದಕ ವಸ್ತು ಸೇವನೆ ಪ್ರಕರಣ: ಶಂಕಿತ ವ್ಯಕ್ತಿ ಪೋಲೀಸ್ ವಶಕ್ಕೆ

ಬೈಂದೂರು: ಬೈಂದೂರು ಠಾಣಾ ವ್ಯಾಪ್ತಿಯ ಶಿರೂರು ಗ್ರಾಮದ ಶಿರೂರು ಮಾರ್ಕೆಟ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇವನೆ ಮಾಡಿಕೊಂಡು ಅಮಲಿನಲ್ಲಿದ್ದ ತಾಲೂಕಿನ ಮಹಮ್ಮದ್ ಶರೀಫ್ (25) ಎಂಬಾತನನ್ನು ಸೆ.8 ರಂದು ಸಂಜೆ 4:30 ಕ್ಕೆ ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಎ ಕಾಯ್ಕಿಣಿ ಮತ್ತು ಸಿಬ್ಬಂದಿಗಳು  ವಶಕ್ಕೆ ಪಡೆದುಕೊಂಡಿದ್ದು, ಸದ್ರಿ ವ್ಯಕ್ತಿಯು ನಿಷೇಧಿತ ಮಾದಕ ವಸ್ತುಗಳನ್ನು ಸೇವಿಸಿರುವ ಸಂಶಯವಿದ್ದ ಕಾರಣ ಆತನನ್ನು ಕಛೇರಿಗೆ ಕರೆತಂದು ಹೆಚ್ಚಿನ ವೈದ್ಯಕೀಯ ತಪಾಸಣೆಗಾಗಿ ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ವೈದ್ಯಾಧಿಕಾರಿಯವರವರ ಮುಂದೆ […]

ಮಣಿಪಾಲದಲ್ಲಿ ಗಾಂಜಾ ಸೇವನೆ: ಕುಕ್ಕಿಕಟ್ಟೆಯ ಯುವಕ ಪೊಲೀಸ್ ವಶಕ್ಕೆ

ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ಯುವಕನೋರ್ವನನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮಣಿಪಾಲ ವಿದ್ಯಾರತ್ನ ನಗರದಲ್ಲಿ ನಡೆದಿದೆ. ಕುಕ್ಕಿಕಟ್ಟೆಯ 24 ವರ್ಷದ ನಿಹಾತ್‌ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ಜೂ.11ರಂದು ವಿದ್ಯಾರತ್ನ ನಗರದ ಸಾರ್ವಜನಿಕ‌ ಸ್ಥಳದಲ್ಲಿ ಅಮಲು ಪದಾರ್ಥ ಸೇವಿಸಿದಂತೆ ಕಂಡುಬಂದಿದ್ದು, ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಜೂ.17 ರಂದು ವೈದ್ಯರು  ನೀಡಿರುವ ವರದಿಯಲ್ಲಿ ನಿಹಾತ್ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಸಂಬಂಧ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಂಜಾ ಎಳೆಯುತಿದ್ದ ಆರು ಯುವಕರು ಅರೆಸ್ಟ್

ಉಡುಪಿ: ನಗರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಎಳೆಯುತಿದ್ದ ಆರು ಮಂದಿ ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ನಾರಯಣ ಗುರು ಮಂದಿರದ ಹಿಂಭಾಗದ ನಿವಾಸಿ ಚೇತನ್ (26), ಕೊಳಲಗಿರಿ ಚಕ್ಕುಲಿಕಟ್ಟೆ ನಿವಾಸಿ ಪವಡಪ್ಪ ನಿ.ಬಿಳಗಲ್ (25),ಅಲೆವೂರು ನಿವಾಸಿ ಸತೀಶ್.ಎಸ್(32), ಕಲ್ಮಾಡಿ ನಿವಾಸಿ ದೀಕ್ಷಿತ್ ಪೂಜಾರಿ (28), ಅಜ್ಜರಕಾಡು ಡಿಸಿ ಆಫಿಸ್ ಕ್ವಾಟರ್ಸ್ ನಿವಾಸಿ ಪುನೀತ್(18), ಯತೀಶ್(19) ಬಂಧಿತ ಆರೋಪಿಗಳು. ಆರು ಮಂದಿಯನ್ನು ಮಣಿಪಾಲ ಕೆಎಂಸಿ ಫೊರೆನ್ಸಿಕ್ ಮೆಡಿಸಿನ್ ವಿಭಾಗದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿಯಲ್ಲಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿದ್ದು, ವಿವಿಧ […]

ಅಕ್ರಮ ಗಾಂಜಾ ಮಾರಾಟ: ಓರ್ವನ ಬಂಧನ

ಉಡುಪಿ: ಅಕ್ರಮ ಗಾಂಜಾ ಮಾರಾಟಕ್ಕೆ ಸಂಬಂಧಿಸಿ ಇಂದ್ರಾಳಿ ರೈಲ್ವೆ ನಿಲ್ದಾಣದ ಬಳಿ ಜು.24ರಂದು ಓರ್ವನನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರ ರಾಜ್ಯದ ಲಾತೂರು ಜಿಲ್ಲೆಯ ಅವಿನಾಶ್ ದಿಗಂಬರ್ ಲೋಖಂಡೆ(28) ಬಂಧಿತ ಆರೋಪಿ. ಈತನಿಂದ 40ಸಾವಿರ ರೂ. ವೌಲ್ಯದ 2.40ಕೆ.ಜಿ. ಗಾಂಜಾ ಮತ್ತು 5000ರೂ. ವೌಲ್ಯದ ಮೊಬೈಲ್ ವಶಪಡಿಸಿ ಕೊಳ್ಳಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಎಸ್ಪಿ ನಿಶಾ ಜೇಮ್ಸ್ ನಿರ್ದೇಶನದಲ್ಲಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ […]

ಕಾರಿನಲ್ಲಿ‌ ಗಾಂಜಾ ‌ಸಾಗಾಟ: ಇಬ್ಬರು ವಶ

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಕಾವೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ನೆಕ್ರಾಜೆ ಲಕ್ಷಂಬೀಡು ಕಾಲೋನಿ ನಿವಾಸಿ ಮಹಮ್ಮದ್ ಇಕ್ಬಾಲ್ ಮತ್ತು ಕಾಸರಗೋಡು ಎರಿಯಾಲ್ ಲೈಟ್ ಹೌಸ್ ಬೀಚ್ ರೋಡ್ ನಿವಾಸಿ ಫಜಲ್ ಎ.ಎಂ. ಬಂಧಿತ ಆರೋಪಿಗಳು. ಕೇರಳ ನೋಂದಣಿ ಸಂಖ್ಯೆಯ ಮಾರುತಿ ಕಾರಿನಲ್ಲಿ ಮಣಿಪಾಲದ ಕಡೆಗೆ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಕಾವೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಪದವಿನಂಗಡಿಯಿಂದ ಬೋಂದೆಲ್ ಕಡೆಗೆ ಹೋಗುವ ಈಶ್ವರಕಟ್ಟೆ ಬಳಿ ಆರೋಪಿಗಳನ್ನು […]