ಗರ್ಡಾಡಿ: ಕಾಡುಪ್ರಾಣಿ ದಾಳಿಗೆ ಸಾಕುನಾಯಿ ಬಲಿ

ಬೆಳ್ತಂಗಡಿ, ಜು. 16: ಕಾಡುಪ್ರಾಣಿಯೊಂದು‌ ಸಾಕು ನಾಯಿಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಗರ್ಡಾಡಿ ಗ್ರಾಮದ ಡೆಂಜೋಳಿ ಎಂಬಲ್ಲಿ ಸೋಮವಾರ ರಾತ್ರಿ ಸಂಭವಿಸಿದೆ. ಡೆಂಜೋಳಿಯ ರಘುರಾಮ ಶೆಟ್ಟಿ ಎಂಬವರ ಮನೆಯ ಸಾಕು ನಾಯಿ ಸೋಮವಾರ ರಾತ್ರಿಯಿಂದ ನಾಪತ್ತೆಯಾಗಿತ್ತು. ಮಂಗಳವಾರ ಬೆಳಿಗ್ಗೆ ಮನೆಯವರು‌ ಹುಡುಕಾಡಿದಾಗ ಗದ್ದೆಯ ಸಮೀಪ ಮೃತದೇಹ ಪತ್ತೆಯಾಗಿದೆ. ನಾಯಿಯ ಮುಖದ ಭಾಗಕ್ಕೆ ಸಂಪೂರ್ಣ ಗಾಯವಾಗಿದ್ದು, ಕಣ್ಣುಗಳು‌, ಮೂತಿ ಚಚ್ಚಿ ಹುಡಿಯಾದಂತಿತ್ತು. ಚಿರತೆ ಅಥವಾ ಕಾಡು ಹಂದಿ ದಾಳಿ ನಡೆಸಿ ಕೊಂದಿರಬಹುದು ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ. […]