ಹಿರ್ಗಾನ ಗೇರುಬೀಜ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಕೋಟ್ಯಾಂತರ ಮೌಲ್ಯದ ಸೊತ್ತು ಬೆಂಕಿಗೆ ಆಹುತಿ

ಕಾರ್ಕಳ: ಹಿರ್ಗಾನ ಗ್ರಾಮದ  ಹಾರ್ಜಡ್ಡು ಸಮೀಪದ ಗೇರುಬೀಜ ಕಾರ್ಖಾನೆಯೊಂದರಲ್ಲಿ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಕೋಟ್ಯಾಂತರ ಮೌಲ್ಯದ ಸೊತ್ತು ಬೆಂಕಿಗೆ ಆಹುತಿಯಾಗಿದೆ. ಪ್ರಕಾಶ್ ಪುತ್ರನ್ ಎಂಬುವವರಿಗೆ ಸೇರಿದ ಮಾರುತಿ ಇಂಡಸ್ಟ್ರೀಸ್ ಫ್ಯಾಕ್ಟರಿಯ ಎರಡು ಈಚರ್ ಲಾರಿಗಳು ಸೇರಿದಂತೆ ಸುಮಾರು ಎರಡು ಕೋಟಿಗೂ ಹೆಚ್ಚಿನ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ. ಅಗ್ನಿಶಾಮಕದಳದ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಪ್ರಗತಿಯಲ್ಲಿದೆ.