ಕರಾವಳಿಯ ಜೀವನಾಡಿ ಮತ್ಸ್ಯಗಂಧಾ ಎಕ್ಸ್ ಪ್ರೆಸ್ ಗೆ ರಜತ ಸಂಭ್ರಮ: ಉಡುಪಿ ನಿಲ್ದಾಣದಲ್ಲಿ ಸಂಭ್ರಮಾಚರಣೆ

ಉಡುಪಿ: ದಿ. ಜಾರ್ಜ್ ಫೆರ್ನಾಂಡೀಸ್ ಅವರ ಕನಸಿನ ಕೂಸು, ಅವಿಭಜಿತ ದ.ಕ ಜಿಲ್ಲೆಯನ್ನು ಒಂದುಗೂಡಿಸುವ ಕೊಂಕಣ ರೈಲ್ವೆಯ “ಮತ್ಸ್ಯ ಗಂಧಾ” ಎಕ್ಸ್‌ಪ್ರೆಸ್‌ ರೈಲು ಈ ಮಾರ್ಗದಲ್ಲಿ ತನ್ನ ಓಡಾಟವನ್ನು 1998ರ ಮೇ 1ರಂದು ಪ್ರಾರಂಭಿಸಿತು. ಉಡುಪಿಯೂ ಕೂಡಾ ಪ್ರತ್ಯೇಕ ಜಿಲ್ಲೆಯಾಗಿ ರೂಪುಗೊಂಡು ರಜತ ಸಂಭ್ರಮವನ್ನು ಆಚರಿಸುತ್ತಿರುವ ಈ ಹೊತ್ತಿನಲ್ಲಿ ಮತ್ಸ್ಯಗಂಧಾ ಎಕ್ಸ್‌ಪ್ರೆಸ್‌ ಕೂಡಾ 25 ವರ್ಷ ಪೂರ್ಣಗೊಳಿಸಿ ರಜತ ಮಹೋತ್ಸವವನ್ನು ಆಚರಿಸುತ್ತಲಿದೆ. ಈ ದಿನವನ್ನು ಅವಿಸ್ಮರಣೀಯವಾಗಿಸಲು ಉಡುಪಿ ರೈಲು ಯಾತ್ರಿ ಸಂಘವು ಇದನ್ನು ವಿಶೇಷ ರೀತಿಯಲ್ಲಿ ಆಚರಿಸಲು […]

ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ

ನವದೆಹಲಿ: ಕೇಂದ್ರದ ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್(88) ಅವರು ಮಂಗಳವಾರ  ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದ ಕಾರಣ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ದುಃಖ ವ್ಯಕ್ತಪಡಿಸುತ್ತಿದ್ದಾರೆ. ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ರಕ್ಷಣಾ ಸಚಿವರಾಗಿದ್ದ ಇವರು ತಮ್ಮ ಸಾಮಾಜಿಕ ಕೆಲಸಗಳಿಂದಲೇ ಒರ್ವ ಜನನಾಯಕನಾಗಿ ಗುರುತಿಸಿಕೊಂಡಿದ್ದರು. 1970ರ ಸಮಾಜವಾದದ ಹೋರಾಟದಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ಫರ್ನಾಂಡಿಸ್, ಜನತಾ ದಳದ ಮುಖಂಡರಾಗಿ ಸಮತಾ ಪಕ್ಷ ಕಟ್ಟಿದ್ದರು. […]