ಗಿರ್ ಗಿಟ್ ನಿಷೇದಾಜ್ಞೆ ವಿಚಾರ: FB ಖಾತೆಗಳ ಟೀಕೆ, ಆರೋಪಿಗಳಿಗೆ ವಕಾಲತು ಹಾಕಲ್ಲ: ವಕೀಲರ ಸಂಘ ನಿರ್ಧಾರ

ಮಂಗಳೂರು: ಗಿರಿಗಿಟ್ ಚಿತ್ರದ ವಿರುದ್ಧ ನ್ಯಾಯಾಲಯ ಮೆಟ್ಟಿಲೇರಿದ ನ್ಯಾಯವಾದಿಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮತ್ತು ಅವಾಚ್ಯ ಶಬ್ದಗಳಿಂದ ಅವಹೇಳನ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸ್ ಇಲಾಖೆ ಪಣ ತೊಟ್ಟಿದೆ. ಈಗಾಗಲೇ ಎರಡು ಖಾತೆಗಳನ್ನು ಸ್ತಂಬನ ಮಾಡಲಾಗಿದ್ದು, ಇನ್ನಷ್ಟು ಫೇಸ್‌ಬುಕ್ ಖಾತೆಗಳ ವಿರುದ್ಧ ಕ್ರಮ ಕೈಗೊಂಡು ಆರೋಪಿಗಳನ್ನು ತಕ್ಷಣ ಬಂಧಿಸಲಾಗುವುದು ಎಂದು ಸಹಾಯಕ ಪೊಲೀಸ್ ಆಯುಕ್ತ ಭಾಸ್ಕರ್ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನ ಬಂದರು ಠಾಣೆಯಲ್ಲಿ ತಮ್ಮನ್ನು ಭೇಟಿಯಾದ ವಕೀಲರ ನಿಯೋಗಕ್ಕೆ ಅವರು ಈ ಭರವಸೆ ನೀಡಿದ್ದಾರೆ. […]

ಗಿರ್ ಗಿಟ್ ನಿಷೇದಾಜ್ಞೆ: ಆಕ್ಷೇಪಾರ್ಹ ದೃಶ್ಯ ತೆಗೆಯಲು ಚಿತ್ರ ತಂಡ ಒಪ್ಪಿಗೆ

ಮಂಗಳೂರು: ಗಿರಿಗಿಟ್ ಚಿತ್ರದ ವಿವಾದ ಕೊನೆಗೂ ನಿರ್ಣಾಯಕ ಹಂತ ತಲುಪಿದೆ. ಚಿತ್ರದಲ್ಲಿ ನ್ಯಾಯಾಂಗ ನಿಂದನೆ ಮತ್ತು ವಕೀಲ ಸಮುದಾಯದ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎಂಬ ಅಂಶ ಇರುವ ಭಾಗಗಳನ್ನು ಬೇಷರತ್ತಾಗಿ ತೆಗೆದು ಹಾಕಲು ಗಿರಿಗಿಟ್ ಚಿತ್ರ ತಂಡ ಒಪ್ಪಿಕೊಂಡಿದೆ. ಮಂಗಳೂರಿನ ಪ್ರಧಾನ ಕಿರಿಯ ಸಿವಿಲ್ ನ್ಯಾಯಾಧೀಶರ ಮುಂದೆ ಚಿತ್ರತಂಡದ ಪರ ವಾದ ಮಂಡಿಸಿದ ಗಿರಿಗಿಟ್ ಪರ ವಕೀಲರು ಚಿತ್ರ ಪ್ರದರ್ಶನ ಮುಂದುವರಿಸಲು ಅನುಮತಿ ಯಾಚಿಸಿದರು. ತಾಂತ್ರಿಕ ಕಾರಣಗಳಿಂದ ಚಿತ್ರ ಪ್ರದರ್ಶನ ಮುಂದುವರಿಯುತ್ತಿದ್ದು, ಚೆನ್ನೈನಲ್ಲಿ ಚಲನಚಿತ್ರದ ಭಾಗಗಳನ್ನು ಎಡಿಟ್ […]

‘ಗಿರ್‌ಗಿಟ್’ ತುಳು ಚಲನಚಿತ್ರಕ್ಕೆ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ

ಮಂಗಳೂರು: ಎರಡು ವಾರಗಳ ಹಿಂದೆ ಬಿಡುಗಡೆಗೊಂಡು ಭರ್ಜರಿ ಯಶಸ್ಸಿನೊಂದಿಗೆ ಪ್ರದರ್ಶನ ಕಾಣುತ್ತಿರುವ ‘ಗಿರ್‌ಗಿಟ್’ ತುಳು ಚಲನಚಿತ್ರದ ಪ್ರದರ್ಶನಕ್ಕೆ ಮಂಗಳೂರಿನ ಪ್ರಧಾನ ಸಿವಿಲ್ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಚಿತ್ರದಲ್ಲಿ ವಕೀಲರ ಸಮುದಾಯವನ್ನು ಅವಹೇಳನ ಮಾಡಲಾಗಿದೆ. ಜೊತೆಗೆ ನ್ಯಾಯಾಲಯವನ್ನು ನಿಂದನೆ ಮಾಡಲಾಗಿದೆ ಎಂದು ವಕೀಲರ ಸಂಘ ನ್ಯಾಯಾಲಯಕ್ಕೆ ದೂರು ನೀಡಿತ್ತು. ಸಿನಿಮಾದಲ್ಲಿ ನ್ಯಾಯಾಲಯ ಮತ್ತು ವಕೀಲರನ್ನು ತುಚ್ಛವಾಗಿ ಬಿಂಬಿಸಲಾಗಿದ್ದು, ಇದರಿಂದ ನ್ಯಾಯಾಂಗ ಮತ್ತು ವಕೀಲರ ಗೌರವಕ್ಕೆ ಧಕ್ಕೆಯಾಗಿದೆ ಎಂದು ಬಾರ್ ಅಸೋಸಿಯೇಷನ್ ಹೇಳಿದೆ. ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿ, […]