ಅರಣ್ಯ ಸಂರಕ್ಷಣೆಗೆ ಆದ್ಯತೆ ನೀಡದಿದ್ದರೆ ಮನುಜ ಕುಲಕ್ಕೆ ಸಂಕಷ್ಟ: ಜಿ. ಜಗದೀಶ್

ಉಡುಪಿ: ಅರಣ್ಯ ಪ್ರದೇಶದ ವಿಸ್ತೀರ್ಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅರಣ್ಯವನ್ನು ಚಿತ್ರದಲ್ಲಿ ನೋಡುವ ಪರಿಸ್ಥಿತಿ ಎದುರಾಗಿದೆ. ಇನ್ನೂ ನಾವು ಅರಣ್ಯ ಸಂರಕ್ಷಣೆಗೆ ಒತ್ತು ನೀಡದಿದ್ದರೆ ಮುಂದಿನ ದಿನಗಳಲ್ಲಿ ಮನುಷ್ಯ ಇನ್ನಷ್ಟು ಸಂಕಷ್ಟ ಎದುರಿಸಬೇಕಾದ ಸ್ಥಿತಿ ನಿರ್ಮಾಣ ಆಗಬಹುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಕಳವಳ ವ್ಯಕ್ತಪಡಿಸಿದರು. ಉಡುಪಿ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ಅರಣ್ಯ ಇಲಾಖೆ ಹಾಗೂ ಉಡುಪಿ ನಿರ್ಮಿತಿ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಿದ […]