ಮುಂಬೈನಿಂದ ಗೋವಾ ತಲುಪಲು ಕೇವಲ 7 ಗಂಟೆ ಸಾಕು: ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಯೋಗ ಯಶಸ್ವಿ

ಮುಂಬೈ: ಗೋವಾ- ಮುಂಬೈ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಜೂನ್‌ನಿಂದ ಕಾರ್ಯಾಚರಣೆಯನ್ನು ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ವರದಿಗಳಾಗಿವೆ. ಸೆಮಿ ಹೈಸ್ಪೀಡ್ ರೈಲು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್ ಮತ್ತು ಮಡಗಾಂವ್ ನಡುವೆ ಚಲಿಸುತ್ತದೆ ಮತ್ತು ತೇಜಸ್ ಎಕ್ಸ್‌ಪ್ರೆಸ್‌ಗೆ ಹೋಲಿಸಿದರೆ ಮುಂಬೈ ಮತ್ತು ಗೋವಾ ನಡುವಿನ ಪ್ರಯಾಣದ ಸಮಯವನ್ನು ಕನಿಷ್ಠ 45 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ. ಮುಂಬೈ-ಗೋವಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮಾರ್ಗದ ಪ್ರಯೋಗಗಳನ್ನು ಮಂಗಳವಾರ ಯಶಸ್ವಿಯಾಗಿ ನಡೆಸಲಾಯಿತು. ರೈಲು ಏಳು ಗಂಟೆಗಳಿಗಿಂತ ಸ್ವಲ್ಪವೇ ಹೆಚ್ಚು […]

ರಿಷಭ್ ಶೆಟ್ಟಿಯವರನ್ನು ಭೇಟಿಯಾದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್: ಚಿತ್ರ ನಿರ್ಮಾಣಕ್ಕೆ ಸರ್ಕಾರದ ಬೆಂಬಲದ ಬಗ್ಗೆ ಚರ್ಚೆ

ಪಣಜಿ: ಭಾರತದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ರಿಷಭ್ ಶೆಟ್ಟಿ ಗೋವಾಕ್ಕೆ ತೆರಳಿದ್ದ ಸಂದರ್ಭದಲ್ಲಿ ಅವರು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ. ರಿಷಭ್ ಅವರನ್ನು ಭೇಟಿಯಾದ ಬಳಿಕ ಸಾವಂತ್ ಟ್ವೀಟ್ ಮಾಡಿ, “ನಟ, ಬರಹಗಾರ, ಚಲನಚಿತ್ರ ನಿರ್ಮಾಪಕ ರಿಷಭ್ ಶೆಟ್ಟಿ ಅವರನ್ನು ಮಹಾಲಕ್ಷ್ಮಿ, ಪಣಜಿಯಲ್ಲಿ ಭೇಟಿ ಮಾಡಿ ಸಂವಾದ ನಡೆಸಿದೆ. ಅವರ ಕಾಂತಾರ ಚಿತ್ರ ಜನಮನ್ನಣೆ ಗಳಿಸಿದೆ. ವಿವಿಧ ವಿಷಯಗಳ ಕುರಿತು ಚರ್ಚಿಸಿದೆ ಮತ್ತು ಗೋವಾದಲ್ಲಿ ಚಲನಚಿತ್ರ ನಿರ್ಮಾಣಕ್ಕೆ ಗೋವಾ ಸರ್ಕಾರದ ಬೆಂಬಲವನ್ನು ಪುನರುಚ್ಚರಿಸಿದೆ” […]

ಜಿಲ್ಲಾ ಬಿಜೆಪಿ ಕಚೇರಿಗೆ ಪ್ರಮೋದ್ ಸಾವಂತ್ ಭೇಟಿ

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶನಿವಾರದಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಬಿಜೆಪಿ ವತಿಯಿಂದ ಪ್ರಮೋದ್ ಸಾವಂತ್ ಅವರನ್ನು ಅಭಿನಂದಿಸಲಾಯಿತು. ಇದಕ್ಕೂ ಮುನ್ನ ಅವರು ಶ್ರೀಕೃಷ್ಣಮಠಕ್ಕಾಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನ ವರದರಾಜ ಭಟ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಾ.ಕೃಷ್ಣಪ್ರಸಾದ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ […]

ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜಿಲ್ಲಾ ಭೇಟಿ

ಉಡುಪಿ: ವಿವಿಧ ಕಾರ್ಯಕ್ರಮ ನಿಮಿತ್ತ ಶನಿವಾರದಂದು ಜಿಲ್ಲೆಗೆ ಆಗಮಿಸಿದ ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಶಾಸಕ ಕೆ. ರಘುಪತಿ ಭಟ್ ಉಡುಪಿ ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿದರು.

ಕಾಪುವಿನ ಸಮಾಜ ಸೇವಕರಿಗೆ ಜನಸೇವಾ ಸದ್ಭಾವನ ಪುರಸ್ಕಾರ್

ಗೋವಾ: ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಕಾಪುವಿನ ಇಬ್ಬರು ಸಮಾಜ ಸೇವಕರಿಗೆ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟೀಯ ಪ್ರಶಸ್ತಿ ಪ್ರದಾನ ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಏಪ್ರಿಲ್ 20 ರಂದು ಗೋವಾದ ಪಂಚತಾರ ಹೋಟೆಲ್ ವಿವಿಟಾ ತಾಜ್ ಸಭಾಂಗಣದಲ್ಲಿ ನಡೆಯಿತು. ಐ.ಜೆ.ಸಿ ಹಾಗೂ ಇ.ಜೆ.ಎಸ್.ಐ ರಾಷ್ಟೀಯ ಸಮ್ಮೇಳನದಲ್ಲಿ ರಾಷ್ಟೀಯ ಮಟ್ಟದಲ್ಲಿ ಸಮಾಜ ಸೇವಕರಿಗೆ ಕೊಡಮಾಡುವ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟೀಯ ಪ್ರಶಸ್ತಿಯನ್ನು ಜನಸಂಪರ್ಕ ಜನಸೇವಾ ವೇದಿಕೆ ಕಾಪು ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು […]