ಗೋಹತ್ಯೆ ನಿಷೇಧ ಜಾರಿಗೆ ಪೇಜಾವರ ಶ್ರೀಗಳ ಆಗ್ರಹ

ಮಂಗಳೂರು: ಶುಕ್ರವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ನಲ್ಲಿ ಗೋಹತ್ಯೆ ನಿಷೇಧ ಜಾರಿ ಮಾಡಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಆಗ್ರಹಿಸಿದ್ದಾರೆ. ಖಾಸಗಿ ಕಾರ್ಯಕ್ರಮದ ನಿಮಿತ್ತ ಮಂಗಳೂರಿಗೆ ಆಗಮಿಸಿದ ವೇಳೆ ಮಾತನಾಡಿದ ಅವರು, ದೇಶದಲ್ಲಿ ಗೋಹತ್ಯೆ ನಿಷೇಧ ಅಗತ್ಯ ವಾಗಿದೆ ಎಂದರು. ಜತೆಗೆ ದೇಶದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆಗೆ ಮೋದಿಯವರು ಕಾರ್ಯಕ್ರಮ ತರಬೇಕು. ಹಾಗೆಯೇ ಕೃಷಿ ಮತ್ತು ವೈದ್ಯಕೀಯಕ್ಕೆ ಬಜೆಟ್ ನಲ್ಲಿ ಹೆಚ್ಚು ಒತ್ತು ನೀಡಬೇಕೆಂದು ಶ್ರೀಗಳಿ ಮನವಿ ಮಾಡಿದರು.
ಜು.3: ಗೋಹತ್ಯೆ ನೀಷೇಧಕ್ಕೆ ಆಗ್ರಹಿಸಿ ವಿಎಚ್ಪಿ, ಬಜರಂಗದಳದಿಂದ ಪ್ರತಿಭಟನೆ: ಸುನಿಲ್ ಕೆ.ಆರ್.
ಉಡುಪಿ, ಜೂ. 28: ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಗೋ ಹತ್ಯೆಗೆ ಕಡಿವಾಣ ಹಾಕಬೇಕು. ಹಾಗೂ ಗೋ ಹತ್ಯೆ ನಿಷೇಧ ಕಾನೂನನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ವತಿಯಿಂದ ಜುಲೈ 3ರಂದು ಬೆಳಿಗ್ಗೆ 10.30ಕ್ಕೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗಿವುದು ಎಂದು ಬಜರಂಗ ದಳದ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್. ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಉಡುಪಿ ಸೇರಿದಂತೆ ಕರಾವಳಿಯಾದ್ಯಂತ ಗೋ ಕಳ್ಳರು ಪೊಲೀಸರ ಕಣ್ಣು ತಪ್ಪಿಸಿ ಹಿಂಸಾತ್ಮಕವಾಗಿ ಗೋಕಳ್ಳ […]
ಗೋಹತ್ಯೆ ನಿಷೇಧಿಸಲು ಮೋದಿ ಸರಕಾರ ಸೂಕ್ತ ಕಾನೂನು ರೂಪಿಸಬೇಕು: ಪೇಜಾವರ ಶ್ರೀ

ಉಡುಪಿ: ಗೋಹತ್ಯೆ, ಗೋಮಾಂಸದ ಭಕ್ಷಣೆ ಹೇಯ ಕೃತ್ಯ. ಮಾನವೀಯ ನೆಲೆಯಲ್ಲಿ ಗೋವಿನ ರಕ್ಷಣೆಯಾಗಬೇಕು. ಕೇಂದ್ರದಲ್ಲಿ ಬಿಜೆಪಿ ಬಹುಮತದಿಂದ ಆಯ್ಕೆಯಾಗಿದೆ. ಹೀಗಾಗಿ ನರೇಂದ್ರ ಮೋದಿ ನೇತೃತ್ವದ ಸರಕಾರ ಗೋವಿನ ರಕ್ಷಣೆಗೆ ಸೂಕ್ತ ಕಾನೂನು ರೂಪಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರು ಹೇಳಿದ್ದಾರೆ. ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಾನುವಾರ ದೇಸಿ ಗೋ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಪಶು ಸಂಪತ್ತು ಬೆಳೆಯಬೇಕು. ಅಮೃತ ಕೊಡುವ ಗೋವುಗಳ ಬಗ್ಗೆ ಕಾಳಜಿ ವಹಿಸಬೇಕಿದೆ. ಗೋವುಗಳನ್ನು ಉಳಿಸುವ ಕಾಳಜಿ ಯಾರು […]