ಅಂತರ್ ಜಿಲ್ಲಾ ಗೋಕಳ್ಳ ಬಶೀರ್ ಬಂಧನ; ಉಜಿರೆ ಸೇರಿದಂತೆ ಹಲವೆಡೆ ಕಳ್ಳತನ ನಡೆಸಿದ್ದ ಬಶೀರ್

ಮಂಗಳೂರು: ಕಳೆದ ಕೆಲದಿನಗಳ‌ ಹಿಂದೆ ಉಜಿರೆ ಸಮೀಪ ಕಾರಿನಲ್ಲಿ‌ ಅಕ್ರಮ ದನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಶುಕ್ರವಾರ ಬಂಧಿಸಲಾಗಿದೆ. ಬಶೀರ್ ಯಾನೆ ಆರ್ಗಾ ಬಶೀರ್ ಬಂಧಿತ ಆರೋಪಿ. ಮೂಡಬಿದ್ರೆಯ ತೋಡಾರ್ ಬಳಿ ಈತನನ್ನು ವಶಕ್ಕೆ ಪಡೆಯಲಾಗಿದೆ. ಹಲವಾರು ದನಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತ ತಲೆ ಮರೆಸಿಕೊಂಡಿದ್ದು, ದನ ಕಳ್ಳತನವನ್ನೆ ಕಸುಬನ್ನಾಗಿಸಿಕೊಂಡಿದ್ದ. ಅಂತರ್ ಜಿಲ್ಲಾ ದನಕಳ್ಳತನ ಮತ್ತು ಮಾರಾಟವನ್ನೇ ಕಸುಬನ್ನಾಗಿಸಿಕೊಂಡಿದ್ದ ಈತನ ವಿರುದ್ದ ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಕೇಸ್ ದಾಖಲಾಗಿದ್ದವು. ಸುರತ್ಕಲ್ ಕೃಷ್ಣಾಪುರ ನೈತಂಗಡಿಯಲ್ಲಿ ಮನೆಯಿಂದ […]

ಗೋಮಾಂಸ ರಫ್ತಿನ ಹಿಂದಿರುವ ಅಸಲಿಯತ್ತು ಬೆತ್ತಲೆಗೊಳಿಸಲಿ: ಅನ್ಸಾರ್ ಅಹಮದ್

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ಯಶ್ ಪಾಲ್ ಸುವರ್ಣ ಅವರು ಗೋಕಳ್ಳತನ ಪ್ರಕರಣವನ್ನು ಹತೋಟಿಗೆ ತರಲು ಆಗ್ರಹಿಸುವ ಭರದಲ್ಲಿ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವುದು ಖಂಡನೀಯ. ಗೋಕಳ್ಳತನವನ್ನು ಯಾವ ಜಾತಿ ಧರ್ಮದವರೂ ಸಮರ್ಥಿಸಿಕೊಳ್ಳುತ್ತಿಲ್ಲ. ಯಶ್ ಪಾಲ್ ಸುವರ್ಣದವರು ಭಾರತದಿಂದ ವಿದೇಶಕ್ಕೆ ರಫ್ತಾಗುತ್ತಿರುವ ಗೋಮಾಂಸದ ಬಗ್ಗೆ ಚಕಾರವೆತ್ತದೆ ಸ್ಥಳೀಯವಾಗಿ ನಡೆಯುತ್ತಿರುವ ಗೋಸಾಗಾಟ ಗೋಹತ್ಯೆಯ ಬಗ್ಗೆ ಮಾತನಾಡುತ್ತಿರುವುದು ಅವರ ದ್ವಿಮುಖ ನೀತಿಯನ್ನು ಎತ್ತಿ ತೋರಿಸುತ್ತಿದೆ. ಗೋಹತ್ಯೆಯನ್ನು ವಿರೋಧಿಸುವ ನಿಟ್ಟಿನಲ್ಲಿ ಹೇಳಿಕೆ ನೀಡುವ ಪ್ರತಿಭಟನೆಯನ್ನು […]

ಮಂಗಳೂರು: ಕರಾವಳಿ ಗೋಕಳ್ಳತನ ಪತ್ತೆಗೆ ವಿಶೇಷ ತಂಡ ರಚನೆ: ಸಂದೀಪ್‌ ಪಾಟೀಲ್

ಮಂಗಳೂರು, ಜೂ.28: ಗೋವುಗಳ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಲು ವಿಶೇಷ ತಂಡವನ್ನು ರಚನೆ ಮಾಡಲಾಗಿದೆ. ಮಂಗಳೂರಿನ ಕಮಿಷನರೇಟ್ ವ್ಯಾಪ್ತಿ ಜತೆಗೆ  ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಹಾಗೂ ಕೇರಳ ರಾಜ್ಯದಲ್ಲಿ ಕೆಲವೊಂದು ಗೋವು ಕಳವು ಆರೋಪಿಗಳು ವಾಸಿಸುತ್ತಿದ್ದಾರೆ‌. ಆ ಪ್ರದೇಶಗಳ ಮೇಲೆ ಹೆಚ್ಚಿನ ನಿಗಾ ವಹಿಸಿದ್ದು, ರಾತ್ರಿ ಬೀಟ್​ಗಳನ್ನು ಬಿಗಿಗೊಳಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಹೇಳಿದ್ದಾರೆ. ಮಂಗಳೂರಿನ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಪೊಲೀಸ್ ಫೋನ್ ಇನ್ ಕಾರ್ಯಕ್ರಮದ ಬಳಿಕ ಅವರು […]