ಸಕಾರಾತ್ಮಕ ಆಲೋಚನೆಗಳಿಂದ ಉತ್ತಮ ಭವಿಷ್ಯ: ಡಾ. ವಿಜಯ ಬಲ್ಲಾಳ್

ಉಡುಪಿ: ಉತ್ತಮ ಆಹಾರ ಪದ್ಧತಿ ಮತ್ತು ಆಚಾರ ವಿಚಾರಗಳೇ ನಮ್ಮನ್ನು ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಂತರನ್ನಾಗಿ ಮಾಡುತ್ತದೆ. ಸಕಾರಾತ್ಮಕ ಆಲೋಚನೆಗಳೇ ಉತ್ತಮ ಭವಿಷ್ಯವನ್ನು ನಿರ್ಮಿಸುತ್ತದೆ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ವಿಜಯ ಬಲ್ಲಾಳ್ ತಿಳಿಸಿದರು. ಅವರು ಇಂದು ನಗರದ ರೆಡ್ಕ್ರಾಸ್ ಭವನದಲ್ಲಿ, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾದ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯೋಗ, ಧ್ಯಾನ, ವ್ಯಾಯಾಮದಂತಹ ಸಕಾರಾತ್ಮಕ ಚಿಂತನೆ ಹಾಗೂ […]