ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ವಿದೇಶದಲ್ಲಿರುವವರನ್ನು ವಾಪಾಸ್ ಕರೆಯಿಸಿಕೊಳ್ಳಿ: ಗೋಪಾಲ ಪೂಜಾರಿ

ಕುಂದಾಪುರ: ಕೊರೋನಾ ಮಹಾಮಾರಿ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಆಶಾ ಕಾರ್ಯರ್ತೆಯರ ಹಗಲು-ರಾತ್ರಿ ನಿರಂತರ ಶ್ರಮದಿಂದಾಗಿ ಇಂದು ಉಡುಪಿ ಕೊರೋನಾ ನಿಯಂತ್ರಣದಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ ಜಿಲ್ಲಾಡಳಿತ ಈ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಶುಕ್ರವಾರ ಹೆಮ್ಮಾಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಕುಟುಂಬ ನಿರ್ವಹಣೆಗಾಗಿ ಊರು ಬಿಟ್ಟು ಮುಂಬೈ, ಬೆಂಗಳೂರು, ಹೈದರಾಬಾದ್, ದುಬೈ ಮುಂತಾದೆಡೆಗಳಲ್ಲಿ ನಲೆಸಿದ ಯುವಕರು ಇಂದು ಅತಂತ್ರರಾಗಿದ್ದಾರೆ. ಅವರನ್ನು ನಾವು […]