ಕೊಡವೂರು ವಾರ್ಡ್ 20ನೇ ಬೃಹತ್ ಗ್ರಾಮ ಸಭೆ: ಸರ್ಕಾರದ ಯೋಜನೆಗಳ ಮಾಹಿತಿ ನೀಡುವ ಕಾರ್ಯ ಸಂಪನ್ನ

  ಉಡುಪಿ:  ಕೊಡವೂರು ವಾರ್ಡಿನ 20ನೇ ಗ್ರಾಮ ಸಭೆಯು ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯಿತು. ಮಲ್ಪೆ ಠಾಣಾಧಿಕಾರಿ  ಶಕ್ತಿವೇಳು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಗ್ರಾಮ ಸಭೆಯನ್ನು ಮಾಡುವ ಮೂಲಕ ಜನರ ಕುಂದು ಕೊರತೆಗಳನ್ನು ತಿಳಿದು ಅದಕ್ಕೆ ಉತ್ತರ ನೀಡುವ ಪ್ರಯತ್ನ ಮಾಡಬಹುದು. ಅಪರಾಧವಿಲ್ಲದ ಸಮಾಜ ನಿರ್ಮಿಸಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಮತ್ತು ನಾವು ನಮ್ಮ ಮಕ್ಕಳ ಬಗ್ಗೆ ಜವಾಬ್ದಾರಿಯಿಂದ ನಡೆಯಬೇಕು ಎಂದರು. ನಗರಸಭಾ ಸದಸ್ಯ  ವಿಜಯ್ ಕೊಡವೂರು ಮಾತಾನಾಡಿ, ಕೇಂದ್ರ ಮತ್ತು […]

ಆರೂರು ಗ್ರಾ.ಪಂ.: ವಿಶೇಷ ಗ್ರಾಮಸಭೆ

ಉಡುಪಿ, ಜೂನ್ 15: 21ನೇ ಆರೂರು ಗ್ರಾಮ ಪಂಚಾಯತ್‍ನ 2019-20 ನೇ ಸಾಲಿನ ಪ್ರಥಮ ಹಂತದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆ ವಿಶೇಷ ಗ್ರಾಮ ಸಭೆಯು ಶನಿವಾರ ಆರೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರುಗಿತು. ಸಭೆಯ ಅಧ್ಯಕ್ಷತೆಯನ್ನು ನೋಡೆಲ್ ಅಧಿಕಾರಿ, ತೋಟಗಾರಿಕಾ ಇಲಾಖೆಯ ಅಧಿಕಾರಿ ದೀಪಾ ವಹಿಸಿದ್ದರು. ಸಭೆಯಲ್ಲಿ ತಾಲೂಕು ಸಂಯೋಜಕ ಪ್ರವೀಣ್ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು. ಆರೂರು ಗ್ರಾಮ ಪಂಚಾಯತ್ […]