ಜೆ.ಎಸ್.ಬಿ ಸಮಾಜದಿಂದ ಲಕ್ಷ ತುಳಸೀ ಅರ್ಚನೆ: ಪುತ್ತಿಗೆ ಶ್ರೀಪಾದರಿಗೆ ಗೌರವ

ಉಡುಪಿ: ಸ್ವಾತಂತ್ರ್ಯ ಉತ್ಸವದ ಶುಭ ಸಂದರ್ಭದಲ್ಲಿ ಜೆ.ಎಸ್.ಬಿ. ಸಮಾಜದವರು ಗೋಕರ್ಣ ಮಠಾಧೀಶರ ಶುಭಾರ್ಶೀವಾದದೊಂದಿಗೆ ತಮ್ಮ ದ್ವಾರಕಾನಾಥ ಭವನದಲ್ಲಿ ಆಯೋಜಿಸಿದ್ದ ಲಕ್ಷ ತುಳಸಿ ಅರ್ಚನೆ ಕಾರ್ಯಕ್ರಮದಲ್ಲಿ ಭಕ್ತ ಜನರ ಅಪೇಕ್ಷೆ ಮೇರೆಗೆ ಪೂಜ್ಯ ಪುತ್ತಿಗೆ ಶ್ರೀಪಾದರು ಭಾಗವಹಿಸಿ ಶುಭಾಶೀರ್ವಚನ ನೀಡಿದರು. ಪೂಜ್ಯ ಶ್ರೀಪಾದರನ್ನು ಭಕ್ತಿ ಗೌರವಾದರಗಳೊಂದಿಗೆ ಸ್ವಾಗತಿಸಿ ಪಾದ ಪೂಜೆಯನ್ನು ನೆರವೇರಿಸಿದರು. ಪೂಜ್ಯ ಶ್ರೀಪಾದರು ಉಪಸ್ಥಿತರಿರುವ ಎಲ್ಲ ಸಮಾಜ ಬಾಂಧವರಿಗೆ ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆಯನ್ನು ನೀಡಿ ಮುಂಬರುವ ತಮ್ಮ ಪರ್ಯಾಯಕ್ಕೆ ಎಲ್ಲರನ್ನು ಪ್ರೀತಿಯಂದ ಆಮಂತ್ರಿಸಿದರು.
ತೆಂಕಪೇಟೆ: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಚಂಡಿಕಾ ಹವನ; ಮಕ್ಕಳಿಗೆ ಅಕ್ಷರಾಭ್ಯಾಸ

ಉಡುಪಿ: ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ವಿಜಯದಶಮಿ ಪ್ರಯುಕ್ತ ಶ್ರೀ ದೇವರ ಸನ್ನಿಧಿಯಲ್ಲಿ ಚಂಡಿಕಾ ಹವನವನ್ನು ವಿನಾಯಕ ಭಟ್ ಮಾರ್ಗದರ್ಶನದಲ್ಲಿ ನಡೆಸಲಾಯಿತು. ದಯಘನ್ ಭಟ್, ಮೇಘಶ್ಯಾಮ್ ಭಟ್, ದೀಪಕ್ ಭಟ್ ಮತ್ತು ಅರ್ಚಕ ವೃಂದದವರು ಸಾಮೂಹಿಕ ಪ್ರಾರ್ಥನೆ, ಧಾರ್ಮಿಕ ಪೂಜಾ ವಿಧಾನಗಳನ್ನು ನಡೆಸಿಕೊಟ್ಟರು. ಚಂಡಿಕಾ ಹವನ ಪೂಜಾ ಕಾರ್ಯದಲ್ಲಿ ಹೆಚ್ ಉಮೇಶ್ ದಂಪತಿಗಳು ಸಹಕರಿಸಿದರು. ಪೂರ್ಣಾಹುತಿ ಮಹಾಪೂಜೆ ಬಳಿಕ ಸಮಾರಾಧನೆ ನಡೆಯಿತು. ಇದೇ ಸಂದರ್ಭದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ವಿನಾಯಕ ಭಟ್ ನಡೆಸಿಕೊಟ್ಟರು. ದೇವಳದ ಆಡಳಿತ […]
ಗೋಕರ್ಣ ಪರ್ತಗಾಳಿ ಮಠಾಧೀಶರಿಂದ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನ ಭೇಟಿ

ಉಡುಪಿ: ಭಾನುವಾರದಂದು ಗೋಕರ್ಣ ಪರ್ತಗಾಳಿ ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಯವರು ಇಲ್ಲಿನ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನಕ್ಕೆ ಭೇಟಿ ನೀಡಿದರು. ಗೋಕರ್ಣ ಪರ್ತಗಾಳಿ ಜೀವವೋತ್ತಮ ಮಠಾಧಿಪತಿಯಾಗಿ ಪ್ರಥಮ ಬಾರಿಗೆ ಭೇಟಿ ನೀಡಿದ ಶ್ರೀಪಾದರನ್ನು ತೆಂಕಪೇಟೆಯ ಐಡಿಯಲ್ ಸರ್ಕಲ್ ನಿಂದ ಮೆರವಣಿಗೆಯಲ್ಲಿ ಪೂರ್ಣ ಕುಂಭ ಸ್ವಾಗತ, ಚಂಡೆ, ಮಂಗಳವಾದ್ಯದ ಮೂಲಕ ಸ್ವಾಗತಿಸಿ ದೇವಾಲಯಕ್ಕೆ ಕರೆತರಲಾಯಿತು. ದೇವರ ಭೇಟಿಯ ಬಳಿಕ ವೇದಿಕೆಯಲ್ಲಿನ ಶ್ರೀಮದ್ ಭಾಗವತ ಗೃಂಥಕ್ಕೆ ಆರತಿ ಬೆಳಗಿಸಿದರು. ಪ್ರವಚನಕಾರದ ವಿದ್ವಾನ್ ಅನಂತಕೃಷ್ಣ ಆಚಾರ್ಯರನ್ನು ಶಾಲು ಹೊದಿಸಿ ಗೌರವಿಸಿದರು. ದೇವಳದ […]
ಮಲ್ಪೆ: ಜಿ.ಎಸ್.ಬಿ ಸಮಾಜದ ರಾಮಮಂದಿರದಲ್ಲಿ ಲಕ್ಷ ತುಳಸಿ ಅರ್ಚನೆ

ಮಲ್ಪೆ ಜಿ.ಎಸ್.ಬಿ ಸಮಾಜದ ರಾಮಮಂದಿರದಲ್ಲಿ ಆಷಾಢ ಏಕಾದಶೀ ಅಂಗವಾಗಿ ಆದಿತ್ಯವಾರ ಜಿ.ಎಸ್. ಬಿ ಯುವಕ ಮಂಡಳಿ ಆಶ್ರಯದಲ್ಲಿಅರ್ಚಕ ವಿಘ್ನೇಶ ಭಟ್, ಲಕ್ಷ್ಮಣ ಭಟ್ ಕಲ್ಯಾಣಪುರ ಇವರ ಮಾರ್ಗದರ್ಶನದಲ್ಲಿ ದೇವರಿಗೆ ಲಕ್ಷ ತುಳಸಿ ಅರ್ಚನೆ ಜರಗಿತು , ಶ್ರೀ ದೇವರ ವಿಶೇಷ ಅಲಂಕಾರ, ಮಹಾಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ನೂರಾರು ಸಮಾಜ ಬಂಧುಗಳು ಉಪಸ್ಥಿತರಿದ್ದರು.
ಮಣಿಪಾಲ: ರಾಜಾಪುರ ಸಾರಸ್ವತ ಮಹಿಳೆಯರಿಂದ ‘ಯವಾ ನೇಜಿ ಲಾವ್ಯ’

ಉಡುಪಿ: ಮಣಿಪಾಲದ ರಾಜಾಪುರ ಸಾರಸ್ವತ ಮಹಿಳಾ ವೇದಿಕೆಯ ವತಿಯಿಂದ ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ಯವಾ ನೇಜಿ ಲಾವ್ಯ (ಬನ್ನಿ ನೇಜಿ ನಡೋಣ) ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವೇದಿಕೆಯ ಅಧ್ಯಕ್ಷೆ ಮೋಹಿನಿ ಎನ್.ನಾಯಕ್ ಅವರ ನೇತೃತ್ವದಲ್ಲಿ ವೇದಿಕೆಯ ಸದಸ್ಯರೆಲ್ಲರೂ ಸೇರಿ ಸುರಿಯುವ ಮಳೆಯಲ್ಲಿಯೇ ಪಾಡ್ದನ ಹಾಡಿ, ಗದ್ದೆಯಲ್ಲಿ ನೇಜಿ (ಬತ್ತದ ಸಸಿ)ಗಳನ್ನು ನೆಟ್ಟು ತಮ್ಮ ಹಿರಿಯರ ಶ್ರಮ ಸಂಸ್ಕೃತಿಯನ್ನು ಗೌರವಿಸಿದರು. ಇದೇ ಸಂದರ್ಭದಲ್ಲಿ ಗದ್ದೆಯಲ್ಲಿ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ಮಧ್ಯಾಹ್ನ ಕಲಾಯಿಗುತ್ತಿನ ಮನೆಯವರಿಂದ ಗ್ರಾಮೀಣ […]