ಭಾರತೀಯ ಆಯುರ್ವೇದ ಪರಂಪರೆಗೆ ಪಕೃತಿ ನೀಡಿದ ವರದಾನ: ‘ಅಮೃತಬಳ್ಳಿಯ’ ಅನನ್ಯ ಆರೋಗ್ಯ ಪ್ರಯೋಜನಗಳು

ವಿಶ್ವದಾದ್ಯಂತ ನಡೆಸಿದ ಅನೇಕ ಅಧ್ಯಯನಗಳ ಆಧಾರದಲ್ಲಿ ಭಾರತದ ಆಯುರ್ವೇದ ಚಿಕಿತ್ಸೆಯನ್ನು ಸರ್ವಶ್ರೇಷ್ಠ ಎಂದು ಪರಿಗಣಿಸಲಾಗಿದೆ. ಸಾವಿರಾರು ವರ್ಷಗಳಿಂದ ಭಾರತದಲ್ಲಿ ಆಯುರ್ವೇದ ಚಿಕಿತ್ಸೆಯನ್ನು ಪರಿಣಾಮಕಾರಿಯಾಗಿ ರೋಗ ಚಿಕಿತ್ಸೆಯಲ್ಲಿ ಬಳಸಿಕೊಳ್ಳಲಾಗಿದೆ. ಭಾರತದ ಆಯುರ್ವೇದ ಪರಂಪರೆಯಲ್ಲಿ ಪಕೃತಿ ವರವಾಗಿ ನೀಡಿರುವ ಮೂರು ಅಮೃತ ಸಸ್ಯಗಳಿವೆ. ಬೆಳ್ಳುಳ್ಳಿ, ಹರೀತಕಿ ಮತ್ತು ಅಮೃತಬಳ್ಳಿ ಇವೇ ಆ ಮೂರು ಸಸ್ಯಗಳು. ಹೆಸರೇ ಸೂಚಿಸುವಂತೆ ಸಾವಿನದವಡೆಯಲ್ಲಿರುವವರನ್ನೂ ಬದುಕಿಸುವ ಶಕ್ತಿ ಉಳ್ಳ ಸಸ್ಯವೇ ಅಮೃತ ಬಳ್ಳಿ. ಸಂಸ್ಕೃತದಲ್ಲಿ ಅಮೃತವಲ್ಲಿ, ಅಮೃತ, ಗುಡೂಚಿ ಮತ್ತು ಹಿಂದಿಯಲ್ಲಿ ಗಿಲೋಯ್ ಎಂದು ಕರೆಯಲ್ಪಡುವ […]