ಕಾರು ಢಿಕ್ಕಿ: ಇಬ್ಬರು ಮಕ್ಕಳ ಸಹಿತ ನಾಲ್ವರು ಸಜೀವ ದಹನ

ಕುಂದಾಪುರ: ಕಾರೊಂದು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಶೌಚಾಲಯ ಗೋಡೆಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಎಂಜಿನ್ ಸ್ಪೋಟಗೊಂಡು ಕಾರಿನೊಳಗಿದ್ದ ಕುಂದಾಪುರ ಮೂಲದ ನಾಲ್ವರು ಸಜೀವ ದಹನಗೊಂಡ ಖೇದಕರ ಘಟನೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚನ್ನರಾಯ ಪಟ್ಟಣದ ಉದಯಪುರ ಎಂಬಲ್ಲಿ ಬುಧವಾರ ತಡರಾತ್ರಿ ಘಟಿಸಿದೆ. ಕುಂದಾಪುರ ತಾಲೂಕಿನ ಗುಜ್ಜಾಡಿ ಸಮೀಪದ ನಾಯಕವಾಡಿ ನಿವಾಸಿ ವಿವೇಕ ನಾಯಕ್(39), ಪತ್ನಿ ರೇಷ್ಮಾ, ಮಕ್ಕಳಾದ ವಿನಂತಿ(9) ಹಾಗೂ ವಿಘ್ನೇಶ್(5) ಸಾವನ್ನಪ್ಪಿದ ದುರ್ದೈವಿಗಳು. ವಿವೇಕ್ ನಾಯಕ್ ಮುಂಬೈ ಮೂಲದ ಗಾರ್ಮೆಂಟ್ ಕಂಪೆನಿಯೊಂದರ […]