ಕುಂದಾಪುರ: ಕುಡಿಯುವ ನೀರಿನ ಪೈಪ್ ಪೈನ್ ಅಳವಡಿಕೆಗೆ ಇಡೀ ರಸ್ತೆ ಅಗೆತ : ಆಕ್ರೋಶಗೊಂಡ ಜನರಿಂದ ಕಾಮಗಾರಿಗೆ ತಡೆ

ಕುಂದಾಪುರ : ಕುಡಿಯುವ ನೀರಿನ ಪೈಪ್ ಪೈನ್ ಅಳವಡಿಕೆಗೆ ಇಡೀ ರಸ್ತೆಯನ್ನು ಅಗೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಸ್ಥಳೀಯರು ಕಾಮಗಾರಿಗೆ ತಡೆಯೊಡ್ಡಿದ ಘಟನೆ ಸೋಮವಾರ ಗುಜ್ಜಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಗುಜ್ಜಾಡಿ ಗ್ರಾಮದ ನಾಯಕವಾಡಿ ಪರಿಸರದ ಮೇಲಂಡಿ ಎಂಬಲ್ಲಿ ಗ್ರಾಮ ಪಂಚಾಯತ್‌ನ ೧೪ನೇ ಹಣಕಾಸು ಯೋಜನೆಯಡಿ ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆಗೆ ೭೧ ಸಾವಿರ ರೂ. ಮೀಸಲಿಡಲಾಗಿತ್ತು. ಮೇ ೩೧ರೊಳಗೆ ಕಾಮಗಾರಿಯನ್ನು ಮುಗಿಸಬೇಕೆಂದು ಸಂಬಂಧಪಟ್ಟ ಗುತ್ತಿಗೆದಾರರಿಗೆ ಸೂಚಿಸಲಾಗಿತ್ತು. ಭಾನುವಾರ ಗುತ್ತಿಗೆದಾರರು ಯಾರ ಗಮನಕ್ಕೂ ತಾರದೇ ಮೇಲಂಡಿ ಪರಿಸರದ […]