ಚರಂಡಿ ಮೇಲೆಯೇ ಕಂಪೌಂಡ್ ನಿರ್ಮಾಣ ಆರೋಪ: ರೊಚ್ಚಿಗೆದ್ದ ಸಾರ್ವಜನಿಕರಿಂದ ರಸ್ತೆ ಅಗೆದು ಪ್ರತಿಭಟನೆ

ಕುಂದಾಪುರ: ಸಾರ್ವಜನಿಕ ರಸ್ತೆಬದಿಯ ಚರಂಡಿ ಮೇಲೆಯೇ ಆವರಣಗೋಡೆ ನಿರ್ಮಿಸಲಾಗಿದ್ದು, ಇದರಿಂದ ಸಾರ್ವಜನಿಕ ಓಡಾಟಕ್ಕೆ ತೊಂದರೆಗಳಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆ ಕುಂದಾಪುರದ ಗುಲ್ವಾಡಿ ಗ್ರಾಮಪಂಚಾಯತ್‌ನಲ್ಲಿ ಬುಧವಾರ ನಡೆದಿದೆ. ಇಲ್ಲಿನ ಗುಲ್ವಾಡಿ ಗ್ರಾಮಪಂಚಾಯತ್ ವ್ಯಾಪ್ತಿಯ ಬೋಳುಕಟ್ಟೆ-ಚಿಕ್ಕಪೇಟೆ ರಸ್ತೆ ಪ್ರವೇಶದಲ್ಲಿ ಮಣ್ಣನ್ನು ಅಗೆದು ರಸ್ತೆ ಬಂದ್ ಮಾಡಿ ಪಂಚಾಯತ್ ಎದುರು ಜಮಾಯಿಸಿದ ಸ್ಥಳೀಯರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ನಲವತ್ತು ವರ್ಷಕ್ಕೂ ಅಧಿಕ ವರ್ಷಗಳಿಂದ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದೇವೆ. ಎಲ್ಲರೂ ಅವರವರ ಜಾಗವನ್ನು ರಸ್ತೆಗೆ ಬಿಟ್ಟುಕೊಟ್ಟಿದ್ದಾರೆ. ಗೋಪಾಲ […]