ಗುಲಾಬಿ ಕೊಲೆ ಪ್ರಕರಣ: ಆರೋಪಿ ಪತ್ನಿಗೆ ಗುಲಾಬಿ ಮನೆಯವರಿಂದ ಹಲ್ಲೆಗೆ ಯತ್ನ

ಕುಂದಾಪುರ: ಹೆಮ್ಮಾಡಿ ಗುಲಾಬಿ ಕೊಲೆ ಪ್ರಕರಣದ ಆರೋಪಿಯನ್ನು ಸೋಮವಾರ ಸ್ಥಳ ಮಹಜರಿಗೆ ಕರೆತಂದ ವೇಳೆಯಲ್ಲಿ ರೊಚ್ಚಿಗೆದ್ದ ಗುಲಾಬಿ ಮನೆಯವರು ಆರೋಪಿಯ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಮುದೂರು ನಿವಾಸಿ ರವಿರಾಜ್ ಪ್ರಕರಣ ಆರೋಪಿಯಾಗಿದ್ದು, ಚಿನ್ನಾಭರಣಕ್ಕಾಗಿ ಗುಲಾಬಿಯನ್ನು ಕೊಲೆಗೈದಿರುವುದಾಗಿ ಪೊಲೀಸ್ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾನೆ. ಆರೋಪಿ ರವಿ ವಿಜಯ ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯ ಪತಿಯಾಗಿದ್ದು, ಗೇರುಬೀಜ ಕಾರ್ಖಾನೆಯ ಸಿಬ್ಬಂದಿಗಳಿಗೆ ಕೊಡಲಾಗಿದ್ದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು. ಆರೋಪಿ ರವಿರಾಜ್‌ಗೆ ಪತ್ನಿ ಹಾಗೂ ನಾಲ್ಕು ವರ್ಷದ ಪುತ್ರ […]