ಹೆಮ್ಮಾಡಿ ಗುಲಾಬಿ ಕೊಲೆ ಪ್ರಕರಣ: ಶಂಕಿತ ಆರೋಪಿ ಬೆಂಗಳೂರಿನಲ್ಲಿ ವಶ

ಕುಂದಾಪುರ: ಹೆಮ್ಮಾಡಿ ಗುಲಾಬಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಶಂಕಿತ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ‌ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ವಿಶ್ವಾಸಾರ್ಹ ಮೂಲಗಳಿಂದ ತಿಳಿದು ಬಂದಿದೆಯಾದರೂ ಆರೋಪಿಯನ್ನು ವಶಪಡಿಸಿಕೊಂಡ ಬಗ್ಗೆ ಪೊಲೀಸರು ಇನ್ನೂ ದೃಢಪಡಿಸಿಲ್ಲ. ಗುಲಾಬಿ ಕೊಲೆ ಪ್ರಕರಣದ ಶಂಕಿತ ಆರೋಪಿ ಕೊಲ್ಲೂರು ಸಮೀಪದ ಮುದೂರ ವ್ಯಕ್ತಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದು ಕುಂದಾಪುರಕ್ಕೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ. ಹೆಮ್ಮಾಡಿ‌ ಹರೆಗೋಡು ವಿಜಯ ಗೇರುಬೀಜ ಸಮೀಪದ ನಿವಾಸಿ ಗುಲಾಬಿ (55) ಫೆಬ್ರವರಿ 28ರ ತಡರಾತ್ರಿ ಮನೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು. […]

ಹೆಮ್ಮಾಡಿ ಹರೆಗೋಡು ನಿವಾಸಿ ಗುಲಾಬಿ ಅನುಮಾನಾಸ್ಪಸ ಸಾವು ಪ್ರಕರಣ

ಕುಂದಾಪುರ: ಹೆಮ್ಮಾಡಿ ಹರೆಗೋಡು ನಿವಾಸಿ ಗುಲಾಬಿ(55) ಅನುಮಾನಾಸ್ಪಸ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದ್ದು, ಕತ್ತು ಹಿಸುಕಿ ಉಸಿರುಗಟ್ಟಿ ಸಾಯಿಸಲಾಗಿದೆ ಎಂಬ ಅಂಶ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಯಲಾಗಿದೆ. ಈ ಮೂಲಕ ಅನುಮಾನಾಸ್ಪದ ಸಾವು ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಪತಿ ತೀರಿಕೊಂಡ ಬಳಿಕ ಕಳೆದೆರಡು ವರ್ಷಗಳಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಗುಲಾಬಿ ಮಾರ್ಚ್ 1ರ ಬೆಳಿಗ್ಗೆ ಗುಲಾಬಿ ಶವವಾಗಿ ಮನೆಯ ಕೋಣೆಯೊಳಗೆ ಪತೆಯಾಗಿದ್ದರು. ಗುಲಾಬಿ ಧರಿಸಿದ್ದ ಚಿನ್ನಾಭರಣಗಳು ಇಲ್ಲದ ಹಿನ್ನೆಲೆಯಲ್ಲಿ ಸ್ಥಳೀಯರು ಕೊಲೆ ಶಂಕೆ […]