ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುವುದು ಪಕ್ಷ ಮುಖಂಡರ ಕರ್ತವ್ಯ: ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಪಕ್ಷದ ಕಚೇರಿ ದೇವಸ್ಥಾನಕ್ಕೆ ಸಮಾನ, ಇಲ್ಲಿಗೆ ಬರುವ ಪ್ರತಿಯೊಬ್ಬ ಕಾರ್ಯಕರ್ತನ ಆಶೋತ್ತರಗಳಿಗೂ ಸ್ಪಂದಿಸುವುದು ಜನಪ್ರತಿನಿಧಿಗಳು, ಪಕ್ಷದ ಮುಖಂಡರ ಕರ್ತವ್ಯವಾಗಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಸೋಮವಾರ ಪಟ್ಟಣದ ಮಂಜುಶ್ರೀ ಎನ್ಕ್ಲೇವ್ಗೆ ಸ್ಥಳಾಂತರಗೊಂಡ ಬಿಜೆಪಿಯ ನೂತನ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪಕ್ಷಕ್ಕೆ ಅದೃಷ್ಟ ತಂದುಕೊಟ್ಟಿರುವ ಚುನಾವಣಾ ಕಚೇರಿಯನ್ನೇ ಪಕ್ಷದ ಅಧಿಕೃತ ಕಚೇರಿಯನ್ನಾಗಿ ಪರಿವರ್ತಿಸಲಾಗಿದೆ. ವಾರಕ್ಕೊಮ್ಮೆ ಇಲ್ಲಿನ ಕಚೇರಿಯಲ್ಲಿದ್ದು ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡುವುದಾಗಿ ಭರವಸೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]
ಪೊಲಿಪು: ಶ್ರೀ ಲಕ್ಷ್ಮೀನಾರಾಯಣ ದೇವರಿಗೆ ಸ್ವರ್ಣ ಕವಚ ಸಮರ್ಪಣೆ

ಉಡುಪಿ: ಶ್ರೀ ಲಕ್ಷ್ಮೀನಾರಾಯಣ ದೇವರಿಗೆ ಸ್ವರ್ಣ ಕವಚ ಸಮರ್ಪಣೆ ಹಾಗೂ 82ನೇ ವಾರ್ಷಿಕ ಭಜನಾ ಮಂಗಳೋತ್ಸವ ದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ವಹಿಸಿದ್ದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು. ಶಾಸಕ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ವಿನಯ […]