ಹಾಜಬ್ಬರಿಗೆ ಬಿಂದುಶ್ರೀ ಪ್ರಶಸ್ತಿ

ಕುಂದಾಪುರ: ವಿವಿಧ ಕ್ಷೇತ್ರದ ಸಾಧಕರಿಗೆ ‘ಸುರಭಿ ರಿ. ಬೈಂದೂರು’ ಸಂಸ್ಥೆಯು ಪ್ರತಿವರ್ಷ ಕೊಡಮಾಡುತ್ತಿರುವ ‘ಬಿಂದುಶ್ರೀ’ ಪ್ರಶಸ್ತಿಗೆ ಈ ಭಾರಿ ಅಕ್ಷರ ಸಂತ ಹರೇಕಳ ಹಾಜಬ್ಬ ಅವರನ್ನು ಆಯ್ಕೆಮಾಡಲಾಗಿದ್ದು, ಫೆ.3ರಂದು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ಹತ್ತು ಸಾವಿರ ರೂ. ನಗದು ಚಿನ್ನದ ಪದಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಫೆಬ್ರವರಿ 3ರ ಸೋಮವಾರ ಸಂಜೆ 6 ಗಂಟೆಗೆ ಬಿಂದುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು,  ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. […]