ಹಣ್ಣುಗಳ ‘ರಾಜ’ ಮಾವಿನ ಹಣ್ಣಿನಲ್ಲಿದೆ ಅನೇಕ ಆರೋಗ್ಯ ಪ್ರಯೋಜನಗಳು

ಹಣ್ಣುಗಳ ರಾಜನೆಂದೇ ಖ್ಯಾತಿವೆತ್ತ ಮಾವು ನೋಡಲು ಸುಂದರ, ತಿನ್ನಲು ರುಚಿಕರ. ಮಾತ್ರವಲ್ಲ, ಮಾವಿನ ಹಣ್ಣಿನ ಆರೋಗ್ಯ ಪ್ರಯೋಜನಗಳೂ ಒಂದೆರಡಲ್ಲ. ಆಮ್ರಫಲ, ಆಮ್, ಮಾವು ಎಂದು ಕರೆಯಲ್ಪಡುವ ಈ ಹಣ್ಣಿನಲ್ಲಿರುವ ಆರೋಗ್ಯ ಪ್ರಯೋಜನಗಳಿಂದಾಗಿಯೆ ಇದನ್ನು ಹಣ್ಣುಗಳ ರಾಜ ಎಂದು ಕರೆಯಲಾಗುತ್ತದೆ. ಮಾವು ಉಷ್ಣವಲಯದ ಮರವಾಗಿದ್ದು ಇದರ ವೈಜ್ಞಾನಿಕ ಹೆಸರು ಮ್ಯಾಂಗಿಫೆರಾ ಇಂಡಿಕಾ. ಇದು ಈಶಾನ್ಯ ಭಾರತ, ಬಾಂಗ್ಲಾದೇಶ ಮತ್ತು ವಾಯುವ್ಯ ಮ್ಯಾನ್ಮಾರ್ ಮೂಲದ ಸಸ್ಯವಾಗಿದೆ. ಭಾರತದಲ್ಲಿ ಬೆಳೆದ ಮಾವಿಗೆ ಪ್ರಪಂಚದಾದ್ಯಂತ ಬೇಡಿಕೆ ಇದೆ. ಮಾವಿನ ಹಣ್ಣಿನ ಆರೋಗ್ಯ ಪ್ರಯೋಜನಗಳು […]
ಮಸಾಲೆಗಳ ರಾಣಿ ಬಹುಪಯೋಗೀ ಏಲಕ್ಕಿಯ ಆರೋಗ್ಯಕಾರಿ ಪ್ರಯೋಜನಗಳು

ಮಸಾಲೆಗಳ ರಾಣಿ ಎಂದೂ ಕರೆಯಲ್ಪಡುವ ಏಲಕ್ಕಿಯನ್ನು ಭಾರತೀಯ ಸಾಂಪ್ರದಾಯಿಕ ಔಷಧ ಅಥವಾ ಆಯುರ್ವೇದದಲ್ಲಿ ಶತಮಾನಗಳಿಂದಲೂ ವಿವಿಧ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತಿದೆ. ಏಲಕ್ಕಿ ಅಥವಾ ಎಲೈಚಿ ಬಹುಪಯೋಗಿ ಮಸಾಲೆಯಾಗಿದ್ದು, ಇದನ್ನು ಬಿರಿಯಾನಿ, ಪುಲಾವ್, ಚಹಾ ಮತ್ತು ಹಲವಾರು ತಿಂಡಿ ತಿನಿಸುಗಳಲ್ಲಿ ಬಳಸುವುದು ಕೇವಲ ಸುವಾಸನೆಗೆ ಮಾತ್ರವಲ್ಲ, ಬದಲಿಗೆ ಇದರಲ್ಲಿರುವ ಆರೋಗ್ಯಭರಿತ ಅಂಶಗಳಿಗಾಗಿಯೂ ಹೌದು. ಏಲಕ್ಕಿಯು ಪೊಟ್ಯಾಸಿಯಮ್, ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ನಂತಹ ಪೋಷಕಾಂಶಗಳು, ವಿಟಮಿನ್ಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಅಜೀರ್ಣದ ಸಮಸ್ಯೆಗಳನ್ನು ನಿವಾರಿಸುತ್ತದೆ ಏಲಕ್ಕಿ ಚಹಾವು ಅಜೀರ್ಣ, […]
ಉಚಿತ ಆರೋಗ್ಯ ತಪಾಸಣಾ ಶಿಬಿರ

ಕೊಡವೂರು:ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಪಿ.ಎಚ್.ಸಿ ಮಲ್ಪೆ ಮತ್ತು ಉಪಕೇಂದ್ರ ಕೊಡವೂರು ವತಿಯಿಂದ ಕೊಡವೂರು ವಾರ್ಡಿನಲ್ಲಿ 11ನೆಯ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ತೇಶ್ಮ, ಶ್ರೀ ದೇವಿ ಜ್ಞಾನೋದಯ ಭಜನಾ ಮಂದಿರದ ಅಧ್ಯಕ್ಷರಾದ ದಿನೇಶ್ ಪುತ್ರನ್, ಮಾತೃ ಮಂಡಳಿಯ ಮಾಜಿ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ಅಶೋಕ್, ಚಂದ್ರಾವತಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಮಣಿಪಾಲ ಆರೋಗ್ಯ ಕಾರ್ಡ್: ಅರ್ಜಿ ಆಹ್ವಾನ
ಕುಂದಾಪುರ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಜಾರಿಗೆ ತರಲಾದ ಮಣಿಪಾಲ ಆರೋಗ್ಯ ಕಾರ್ಡ್ ಮತ್ತು ದಂತ ಆರೋಗ್ಯ ಕಾರ್ಡ್ ಬಿಡುಗಡೆಗೊಂಡಿದ್ದು, ಜನತೆ ಅದರ ಪ್ರಯೋಜನ ಪಡೆಯಬೇಕು ಎಂದು ಮಣಿಪಾಲದ ಸಹಾಯಕ ವ್ಯವಸ್ಥಾಪಕ ಕೃಷ್ಣಪ್ರಸಾದ್ ಬಿ.ಎಸ್. ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆರೋಗ್ಯ ಕಾರ್ಡ್ ಹೊಂದಿರುವ ರೋಗಿಗಳು ವೈದ್ಯರ ಸಮಾಲೋಚನೆಯಲ್ಲಿ ಶೇ. 50, ಪ್ರಯೋಗಾಲಯದಲ್ಲಿ ಶೇ.30, ಹೊರರೋಗಿ ವಿಭಾಗದಲ್ಲಿ ಶೇ. 20 ಹಾಗೂ ವಿವಿಧ ಸೌಲಭ್ಯಗಳಿಗೆ ರಿಯಾಯಿತಿ ನೀಡಲಾಗುತ್ತದೆ. ಇದು ಸಾಮಾನ್ಯ […]
ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಮಾರ್ಚ್ 28 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಎನ್.ಪಿ.ಸಿ.ಡಿ.ಸಿ.ಎಸ್ ಹಾಗೂ ಎನ್.ಟಿ.ಸಿ.ಪಿ ಕಾರ್ಯಕ್ರಮದಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಆಸ್ಪತ್ರೆಯ ಹಿರಿಯ ನಾಗರಿಕರ ವಾರ್ಡ್ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರ ಪ್ರಕಟಣೆ ತಿಳಿಸಿದೆ.