ನಕಲಿ ಎನ್‌ಕೌಂಟರ್‌ ಆರೋಪ ಸುಳ್ಳು

ಉಡುಪಿ: ನಕ್ಸಲ್ ವಿಕ್ರಂ ಗೌಡನನ್ನು ನಕಲಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿಲ್ಲ, ಇದು ಆರೋಪ ಸುಳ್ಳು. ನಕ್ಸಲರು ಮತ್ತು ಎಎನ್‌ಎಫ್ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ವಿಕ್ರಂ ಗೌಡ ಮೃತಪಟ್ಟಿದ್ದಾರೆ ಎಂದು ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ತಿಳಿಸಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.ಎನ್‌ಕೌಂಟರ್‌ ಬಗ್ಗೆ ಯಾವುದೇ ಸಂಶಯ ಬೇಡ. ಎಎನ್‌ಎಫ್ ಸಿಬ್ಬಂದಿ ತಮ್ಮ ಆತ್ಮರಕ್ಷಣೆಗಾಗಿ ನಡೆಸಿದ ದಾಳಿ ಇದಾಗಿದೆ ಹೊರತು ಪೂರ್ವ ನಿಯೋಜಿತ ಅಲ್ಲ ಎಂದರು. ನ.18ರಂದು […]