ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕಳೆದ ವರ್ಷ ಭಾರತೀಯ ಜನತಾ ಪಕ್ಷದ(BJP) ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಎಚ್‌ಬಿ ಪ್ರಭಾಕರ ಶಾಸ್ತ್ರಿ ಮತ್ತು ಅನಿಲ್ ಬಿ ಕತ್ತಿ ಅವರ ಪೀಠವು ಆರೋಪಿಗಳು ಅಪರಾಧದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದನ್ನು ತೋರಿಸಲು ಸಾಕಷ್ಟು ದೋಷಾರೋಪಣೆಯ ಸಾಕ್ಷ್ಯವನ್ನು ಕಂಡುಹಿಡಿದಿದೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸದಸ್ಯರಾಗಿರುವ ಮೂವರು ಆರೋಪಿಗಳಾದ ಇಸ್ಮಾಯಿಲ್ ಶಫಿ ಕೆ, ಕೆ ಮಹಮ್ಮದ್ ಇಕ್ಬಾಲ್ ಮತ್ತು ಶಹೀದ್ ಎಂ […]

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ವಿರುದ್ದದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ವಿರುದ್ಧ ಆರಂಭಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ನಡ್ಡಾ ವಿರುದ್ಧ ಐಪಿಸಿ ಸೆಕ್ಷನ್ 171-ಎಫ್ ಅಡಿಯಲ್ಲಿ ‘ಅಸ್ಪಷ್ಟ ದೂರಿನಲ್ಲಿ’ ‘ಸಡಿಲವಾಗಿ ಹೊರಿಸಲಾದ ಅಪರಾಧದ’ ಆಧಾರದ ಮೇಲೆ ಎಫ್‌ಐಆರ್ ಅನ್ನು ‘ಅಜಾಗರೂಕತೆಯಿಂದ’ ದಾಖಲಿಸಲಾಗಿದೆ ಎಂದು ಕಂಡುಕೊಂಡಿದೆ. ಈ ನಿಬಂಧನೆಯು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಅಥವಾ ಪ್ರಲೋಭನೆಯನ್ನು ದಂಡಿಸುತ್ತದೆ. ಮುಂದಿನ ಪ್ರಕ್ರಿಯೆಗಳಿಗೆ ಅನುಮತಿ ನೀಡುವುದು ಅರ್ಜಿದಾರರ ವಿರುದ್ಧ […]

ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ಆರೋಪ: ಪ್ರಮೋದ್ ಮುತಾಲಿಕ್ ವಿರುದ್ದದ ಎಫ್‌ಐಆರ್ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದಲ್ಲಿ ಶ್ರೀರಾಮ ಸೇನೆಯ ಸ್ಥಾಪಕ-ಅಧ್ಯಕ್ಷ ಪ್ರಮೋದ್ ಮುತಾಲಿಕ್ ವಿರುದ್ಧ 2017 ರಲ್ಲಿ ದಾಖಲಿಸಲಾದ ಪ್ರಥಮ ಮಾಹಿತಿ ವರದಿಯನ್ನು (ಎಫ್‌ಐಆರ್) ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರದ್ದುಗೊಳಿಸಿದೆ ಎಂದು ಬಾರ್ ಎಂಡ್ ಬೆಂಚ್ ವರದಿ ಮಾಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 196 ರ ಅಡಿಯಲ್ಲಿ ಅಗತ್ಯವಿರುವ ರಾಜ್ಯ ಸರ್ಕಾರದಿಂದ ಪೂರ್ವಾನುಮತಿ ಪಡೆಯದೆ ಸಂಬಂಧಪಟ್ಟ ಮ್ಯಾಜಿಸ್ಟ್ರೇಟ್ ದೂರಿನಲ್ಲಿ ಅಪರಾಧದ ಅರಿವನ್ನು ಪಡೆದಿದ್ದಾರೆ ಎಂದು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಗಮನಿಸಿದ್ದಾರೆ. […]

ಪಂಚಾಯತ್ ಚುನಾವಣೆಗೂ ಮುನ್ನ ಎಲ್ಲಾ ಜಿಲ್ಲೆಗಳಲ್ಲಿ ಕೇಂದ್ರ ಪಡೆ ನಿಯೋಜನೆ: ಕಲ್ಕತ್ತಾ ಹೈಕೋರ್ಟ್ ಆದೇಶ

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆಗೆ ಮುನ್ನ ಕಲ್ಕತ್ತಾ ಹೈಕೋರ್ಟ್ ಗುರುವಾರ ಪಶ್ಚಿಮ ಬಂಗಾಳದ ಎಲ್ಲಾ ಜಿಲ್ಲೆಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದೆ. ಈ ಆದೇಶವನ್ನು 48 ಗಂಟೆಗಳ ಒಳಗೆ ಪಾಲಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನ್ಯಾಯಾಲಯ ಸೂಚಿಸಿದೆ. ಪ.ಬಂಗಾಳದ ಜಿಲ್ಲೆಗಳಾದ್ಯಂತ ಕೇಂದ್ರ ಪಡೆಗಳನ್ನು ನಿಯೋಜಿಸಲು ಆದೇಶಿಸಿದ ನ್ಯಾಯಾಲಯ, “ರಾಜ್ಯ ಚುನಾವಣಾ ಆಯೋಗ ಮತ್ತು ಪಶ್ಚಿಮ ಬಂಗಾಳ ರಾಜ್ಯವು ಕೇಂದ್ರ ಪಡೆಗಳ ನಿಯೋಜನೆಯಿಂದ ಏಕೆ ಹಿಂಜರಿಯುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ. ಅಂತಹ ನಿಯೋಜನೆಯು ಈ ಹಿಂದೆ ಅಗತ್ಯ ಫಲಿತಾಂಶಗಳನ್ನು […]

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಕಾನೂನು ತಕ್ಷಣ ಬದಲಾಯಿಸಲು ಸಾಧ್ಯವಿಲ್ಲ: ಮಧು ಬಂಗಾರಪ್ಪ

ಬೆಂಗಳೂರು: ಕರ್ನಾಟಕದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವ ಸಿಂಧುತ್ವಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಕಾನೂನು ಹೋರಾಟದ ನಡುವೆ, ಹೊಸದಾಗಿ ನೇಮಕಗೊಂಡ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ತರಗತಿಗಳಲ್ಲಿ ಹಿಜಾಬ್ ಅನ್ನು ನಿಷೇಧಿಸುವ ಸರ್ಕಾರದ ಆದೇಶವನ್ನು ಕಾಂಗ್ರೆಸ್ ಸರ್ಕಾರವು ತಕ್ಷಣವೇ ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಕರ್ನಾಟಕದಲ್ಲಿ ತನ್ನ ಚುನಾವಣಾ ಪ್ರಚಾರದ ಭಾಗವಾಗಿ ಹಿಜಾಬ್ ಮೇಲಿನ ನಿರ್ಬಂಧಗಳನ್ನು ತೆಗೆದುಹಾಕುವುದಾಗಿ ಕಾಂಗ್ರೆಸ್ ಸರ್ಕಾರ ಭರವಸೆ ನೀಡಿತ್ತು. ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ ಬಂಗಾರಪ್ಪ, “ಹಿಜಾಬ್‌ನಲ್ಲಿನ […]