ಇರಾನ್ ನಲ್ಲಿ ತಾರಕ್ಕೇರಿದ ಹಿಜಾಬ್ ವಿರೋಧಿ ಪ್ರತಿಭಟನೆ: ಶಿರವಸ್ತ್ರಗಳನ್ನು ಸುಟ್ಟ ಇರಾನಿ ಮಹಿಳೆಯರು

ತೆಹ್ರಾನ್: ಹಿಜಾಬ್ ಕಾನೂನುಗಳನ್ನು ಉಲ್ಲಂಘಿಸಿದ್ದಕ್ಕಾಗಿ ಬಂಧನಕ್ಕೊಳಗಾದ ಮಹಿಳೆಯೊಬ್ಬರು ಬಂಧನದ ಸಮಯದಲ್ಲಿ ಸಾವನ್ನಪ್ಪಿದ ನಂತರ ಹಿಜಾಬ್ ವಿರೋಧಿ ಪ್ರತಿಭಟನೆಯನ್ನು ತೀವ್ರಗೊಳಿಸಿರುವ ಇರಾನಿ ಮಹಿಳೆಯರು, ಶಿರವಸ್ತ್ರಗಳನ್ನು ಸುಟ್ಟು ಮತ್ತು ತಲೆಕೂದಲನ್ನು ಕತ್ತರಿಸುವ ಮೂಲಕ ತಮ್ಮ ಅಸಮ್ಮತಿಯನ್ನು ಹೊರಹಾಕುತ್ತಿದ್ದಾರೆ. ಇರಾನಿ ಆಡಳಿತದ ವಿರುದ್ದ ಮಹಿಳೆಯರ ಪ್ರತಿಭಟನೆಯು ಐದನೇ ದಿನವನ್ನು ಪ್ರವೇಶಿಸಿದ್ದು, ವ್ಯಾಪಕವಾಗಿ ಇತರ ನಗರ ಮತ್ತು ಪಟ್ಟಣಗಳನ್ನು ಆವರಿಸುತ್ತಿವೆ. ಹಿಜಾಬ್ ಕಾನೂನು ಉಲ್ಲಂಘಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿ ಮೂರು ದಿನ ಕೋಮಾದಲ್ಲಿದ್ದ ಮಹ್ಸಾ ಅಮಿನಿ ಎಂಬ ಮಹಿಳೆಯೊಬ್ಬರು ಶುಕ್ರವಾರ ಆಸ್ಪತ್ರೆಯಲ್ಲಿ ನಿಧನರಾದ ಬಳಿಕ ಪ್ರತಿಭಟನೆಯ […]

ಮತ್ತೆ ಹಿಜಾಬ್ ಗದ್ದಲ: 99.99% ಜನರು ತೀರ್ಪನ್ನು ಒಪ್ಪಿಕೊಂಡಿದ್ದಾರೆ, ವಿವಾದವನ್ನು ಬೆಳೆಸುವ ಅಗತ್ಯವಿಲ್ಲ: ಬೊಮ್ಮಾಯಿ

ಬೆಂಗಳೂರು: ಮತ್ತೆ ಮರುಜೀವ ಪಡೆದಿರುವ ಹಿಜಾಬ್ ಗದ್ದಲದ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಷಯವನ್ನು ಬೆಳೆಸುವ ಅಗತ್ಯವಿಲ್ಲ, ನ್ಯಾಯಾಲಯವು ಈಗಾಗಲೇ ತೀರ್ಪು ನೀಡಿದೆ. ಎಲ್ಲರೂ ಅದನ್ನು ಅನುಸರಿಸುತ್ತಿದ್ದಾರೆ, 99.99% ತೀರ್ಪನ್ನು ಅನುಸರಿಸಿದ್ದಾರೆ. ನ್ಯಾಯಾಲಯ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ. Karnataka CM Basavaraj Bommai on #HijabRow resurfacing, said, "There is no need of raising an issue. Court has already given its judgement. Everyone […]

ಮುಂದಿನ ಶೈಕ್ಷಣಿಕ ವರ್ಷದಿಂದ ಪ.ಪೂ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ

ಬೆಂಗಳೂರು: ರಾಜ್ಯದಲ್ಲಿ ನಡೆದ ಹಿಜಾಬ್‌ ಗದ್ದಲದಿಂದಾಗಿ 2022-23 ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ಕಡ್ಡಾಯಗೊಳಿಸಲು ಪ.ಪೂ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸೋಮವಾರ ಬಿಡುಗಡೆ ಮಾಡಲಾದ ಇಲಾಖೆಯ ಪ್ರವೇಶ ಮಾರ್ಗಸೂಚಿಯಲ್ಲಿ ಸಮವಸ್ತ್ರದ ಬಗ್ಗೆ ಇದೇ ಮೊದಲ ಬಾರಿಗೆ ಉಲ್ಲೇಖಿಸಲಾಗಿದೆ. ಮಾರ್ಗಸೂಚಿಗಳಲ್ಲಿ ತಿಳಿಸಿರುವಂತೆ ಪದವಿ ಪೂರ್ವ ವಿಶ್ವವಿದ್ಯಾಲಯದ ಮೊದಲನೇ ಮತ್ತು ಎರಡನೇ ವರ್ಷದ ವಿದ್ಯಾರ್ಥಿಗಳು ಸಂಬಂಧಪಟ್ಟ ಕಾಲೇಜು ಅಭಿವೃದ್ಧಿ ಸಮಿತಿಗಳು(ಸಿಡಿಸಿ) ಸೂಚಿಸಿದ ಏಕರೂಪದ ಮಾನದಂಡಗಳಿಗೆ ಬದ್ದರಾಗಿರಬೇಕು. ಇಲಾಖೆಯ ಸೂಚನೆಗಳ ಪ್ರಕಾರ, ವಿದ್ಯಾರ್ಥಿಗಳು ಹಿಜಾಬ್ ಕುರಿತು […]

ಹಿಜಾಬ್ ಪ್ರಕರಣ ವಿಚಾರಣೆ ನಡೆಸುತ್ತಿರುವ ನ್ಯಾಯಾಧೀಶರ ವಿರುದ್ದ ಅವಹೇಳನಕಾರಿ ಟ್ವೀಟ್ ನ ರೀಟ್ವೀಟ್: ನಟ ಚೇತನ್ ಬಂಧನ

ಬೆಂಗಳೂರು: ಹಿಜಾಬ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ತ್ರಿಸದಸ್ಯ ಪೀಠದ ಭಾಗವಾಗಿರುವ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಕನ್ನಡ ನಟ ಮತ್ತು ಹೋರಾಟಗಾರ ಚೇತನ್ ಕುಮಾರ್ ಅಹಿಂಸನನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ನಟನನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಪೊಲೀಸರು ನಟನ ವಿರುದ್ಧ ಐಪಿಸಿ ಸೆಕ್ಷನ್ 505 (ಸಾರ್ವಜನಿಕ ಕಿಡಿಗೇಡಿತನದ ಹೇಳಿಕೆಗಳು) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಸ್ವಯಂಪ್ರೇರಿತ ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ. […]

ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಇಬ್ಬರ ಬಂಧನ

  ಶಿವಮೊಗ್ಗ: ಫೆ. 20 ರಂದು ಶಿವಮೊಗ್ಗ ಜಿಲ್ಲೆಯ ಸೀಗೆ ಹಟ್ಟಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ(24) ನನ್ನು ಬರ್ಬರವಾಗಿ ಕೊಲೆಗೈಯಲಾಗಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಡಿಜಿಪಿಎಸ್ ಮುರುಗನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮುರುಗನ್, ನಗರದಲ್ಲಿ ಕಾನೂನು ಸುವ್ಯವಸ್ಥೆಹದಗೆಡಲು ಬಿಡುವುದಿಲ್ಲ, ಶಾಂತಿ ಕಾಪಾಡಲು ಕ್ರಮ ಕೈಗೊಳ್ಳುತ್ತಿದ್ದೇವೆ ಮತ್ತು ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದೇವೆ. ಜನರು ಶಾಂತಿ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು. ಭಜರಂಗದಳ ಕಾರ್ಯಕರ್ತನ ಹತ್ಯೆಯಿಂದ ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ […]