ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹ

ಬೆಂಗಳೂರು: ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹ ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿದ್ದು, ವಿವಾಹದ ದಿನಾಂಕವನ್ನು ನಿಗದಿ ಮಾಡಲಾಗಿದೆ. ಈ ಕುರಿತು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು. ಈ ವರ್ಷ 1 ಸಾವಿರ ವಿವಾಹ ನಡೆಯುವ ನಿರೀಕ್ಷೆ ಇದ್ದು, ಏಪ್ರಿಲ್ 26 ಮತ್ತು ಮೇ 24ರಂದು ರಾಜ್ಯದ 90 ರಿಂದ 100 ಎ ದರ್ಜೆ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಯಲಿದೆ ಎಂದು ಹೇಳಿದರು. ಸರ್ಕಾರದ ವತಿಯಿಂದ ಸಾಮೂಹಿಕ […]