ಕಿನ್ನಿಗೋಳಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ವೃಂದದ ವಾರ್ಷಿಕೋತ್ಸವ ಸಮಾರಂಭ

ಕಿನ್ನಿಗೋಳಿ: ನಾವು ಹಿಂದೂಗಳಾಗಿ ಒಗ್ಗಟ್ಟಾದಾಗ ಮಾತ್ರ ಸಶಕ್ತ ಸಮಾಜದ ಏಳಿಗೆ ಸಾಧ್ಯ. ನಮ್ಮೊಳಗಿನ ಜಾತಿ – ಪಂಗಂಡಗಳು ಸಾಮೂಹಿಕ ಪ್ರಗತಿಗೆ ತೊಡಕಾಗಬಾರದು ಎಂದು ಕಟೀಲು ಶ್ರೀ ದುರ್ಗಾ ಪರಮೇಶ್ವರೀ ದೇವಳದ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಹೇಳಿದರು. ಅವರು ಕಿನ್ನಿಗೋಳಿ ರಾಜರತ್ನಪುರ ಸರಾಫ್ ಅಣ್ಣಯ್ಯಾಚಾರ್ಯ ಸಭಾ ಭವನದಲ್ಲಿ ಕಿನ್ನಿಗೋಳಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಹಾಗೂ ಶ್ರೀ ಕಾಳಿಕಾಂಬಾ ಮಹಿಳಾ ವೃಂದದ ವಾರ್ಷಿಕೋತ್ಸವ ಸಮಾರಂಭದಲ್ಲಿ ಶುಭಾಶಂಸನೆ ನೀಡಿ ಮಾತನಾಡಿದರು. ಆನೆಗುಂದಿ ವೇದ ಪಾಠಶಾಲೆಯ ಪವನ್ ಶರ್ಮ್ ಅನುಗ್ರಹ […]

ರಾಜ್ಯದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಸರ್ವ ಧರ್ಮ ಮುಖಂಡರಿಂದ ಮನವಿ

  ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಗದ್ದಲದ ಮಧ್ಯೆ, ಶನಿವಾರ ವಿವಿಧ ಧರ್ಮಗಳ ಪ್ರಮುಖ ಧಾರ್ಮಿಕ ಮುಖಂಡರು ಸಾಮರಸ್ಯ ಮತ್ತು ಶಾಂತಿಯಿಂದ ಬದುಕುವಂತೆ ಜನರಲ್ಲಿ ಮನವಿ ಮಾಡಿದರು. ಬೆಂಗಳೂರಿನಲ್ಲಿ ಅನೌಪಚಾರಿಕ ಸಭೆ ನಡೆಸಿದ ಸರ್ವ ಧರ್ಮಗಳ ಧಾರ್ಮಿಕ ಮುಖಂಡರು, ಹಿಂದೆಂದಿಗಿಂತಲೂ ಸಮಾಜಕ್ಕೆ ಈಗ ಶಾಂತಿಯ ಅಗತ್ಯ ಹೆಚ್ಚಿದೆ ಎಂದರು. ಚಿತ್ರದುರ್ಗ ಮಠದ ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, “ಈ ಹಿಜಾಬ್ ವಿವಾದವು ರಾಜ್ಯದ ಜಾತ್ಯತೀತ ರಚನೆಗೆ ಅಡ್ಡಿಪಡಿಸುವ ಮಾನವ ನಿರ್ಮಿತ ಸಂಘರ್ಷವಾಗಿದೆ. ಡ್ರೆಸ್ ಕೋಡ್ ವಿವಾದವು ರಾಜ್ಯಾದ್ಯಂತ […]