ಹಿರಿಯಡಕ: ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ.

ಹಿರಿಯಡಕ: ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡಿದ ಆರೋಪಿಗಳ ವಿರುದ್ಧ ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಜರಗುತ್ತು ಅಂಜಾರು ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾದ ರೇವುನಾಥ ಪ್ರೇಮನಾಥ ಸಂದರ್ಶನಕ್ಕೆ ಮೇ 20ರಂದು ಆತನ ಸ್ನೇಹಿತರಾದ ಸುಧೀಶ ಮತ್ತು ವರುಣ ಅವರು ಹಣ್ಣು, ಬಿಸ್ಕೇಟ್‌ಗಳನ್ನು ತಂದಿದ್ದು, ಮುಖ್ಯದ್ವಾರದಲ್ಲಿ ದ್ವಾರ ಪಾಲಕನಾಗಿ ಕರ್ತವ್ಯಕ್ಕೆ ಇದ್ದ ಸಂತೋಷ ದಗಾಟೆ ಅವರಿಗೆ ನೀಡಿ ರೇವುನಾಥ ಅವರಿಗೆ ಕೊಡಲು ತಿಳಿಸಿದ್ದರು. ಅನಂತರ ಕೈದಿಯೊಂದಿಗೆ ಮಾತನಾಡಿ ಅವರು ತೆರಳಿದ್ದರು. ಅನಂತರ ಕಾರಾಗೃಹದ ಸಿಬ್ಬಂದಿ, ಸಹಾಯಕ ಜೈಲರ್‌ ಸೇರಿ […]