ನಮ ಬಿರುವೆರ್ ಹಿರಿಯಡ್ಕ ವತಿಯಿಂದ ವಿದ್ಯಾರ್ಥಿ ವಸತಿ ನಿಯಲಕ್ಕೆ ಅಕ್ಕಿ ದೇಣಿಗೆ

ಹಿರಿಯಡ್ಕ: ಪಂಚನಬೆಟ್ಟು ವಿದ್ಯಾವರ್ಧಕ ಪ್ರೌಢ ಶಾಲಾ ಖಾಸಗಿ ನೆಲೆಯಲ್ಲಿ ನಡೆಸಲ್ಪಡುವ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ಮಕ್ಕಳ ದೈನಂದಿನ ಊಟೋಪಚಾರಕ್ಕೆ ನಮ ಬಿರುವೆರ್ (ರಿ) ಹಿರಿಯಡ್ಕ ಸದಸ್ಯರು ದೇಣಿಗೆಯಾಗಿ 320ಕೆ. ಜಿ ಬೆಳ್ತಿಗೆ ಅಕ್ಕಿಯನ್ನು ಸಂಗ್ರಹಿಸಿ ಶಾಲಾ ಮುಖ್ಯೋಪಾಧ್ಯಾಯರಾದ ರಮೇಶ್ ಶರ್ವೆಗಾರ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಮ ಬಿರುವೆರ್ ಅಧ್ಯಕ್ಷ ರವಿ ಎಸ್ ಪೂಜಾರಿ, ಕಾರ್ಯದರ್ಶಿ ಸಂತೋಷ್ ಪೂಜಾರಿ, ಕೋಶಾಧಿಕಾರಿ ಸಂದೀಪ್ ಪೂಜಾರಿ, ಗೌರವಾಧ್ಯಕ್ಷ ಬಿ ಎಂ ಶೇಕರ್ ಪೂಜಾರಿ, ಗಂಪ ಸುಂದರ ಪೂಜಾರಿ,ಶೇಖರ್ ಪೂಜಾರಿ ಅಂಜಾರು, […]
ಹಿರಿಯಡ್ಕ: ವೃದ್ದೆಯ ಚಿನ್ನದ ಸರ ಕಳ್ಳತನ ಮಾಡಿದ ಕೆಲಸದಾಕೆಯ ಬಂಧನ

ಹಿರಿಯಡ್ಕ: ಹಿರಿಯಡ್ಕದ ಚೆನ್ನಿಬೆಟ್ಟು ಮದಗ ನಿವಾಸಿ ವಯೋ ವೃದ್ದೆ ಸರಸ್ವತಿ (98) ಎಂಬವರ ಮನೆಯಲ್ಲಿ ಆಕೆಯ ಆರೈಕೆಗಾಗಿ ಉಡುಪಿ ಉಷಾ ಮ್ಯಾರೇಜ್ ಬ್ಯುರೋ ಜಾಬ್ ಲಿಂಕ್ಸ್ ಏಜೆನ್ಸಿ ಮೂಲಕ ಕೆಲಸಕ್ಕೆ ಹೋಂ ನರ್ಸ್ ಅನ್ನು ನೇಮಿಸಲಾಗಿತ್ತು. ಬಾಗಲಕೋಟೆ ಮೂಲದ ರೇಖಾ ಹೆಬ್ಬಳ್ಳಿ ಎನ್ನುವಾಕೆ ಕೆಲಸಕ್ಕೆಂದು ಬಂದಿದ್ದ ಸಮಯದಲ್ಲಿ ಸರಸ್ವತಿಯವರು ಮನೆಯಲ್ಲಿ ಒಬ್ಬರೇ ಇದ್ದದ್ದನ್ನು ಮನಗಂಡು ಅವರ ಕುತ್ತಿಗೆಯಲ್ಲಿದ್ದ ಸುಮಾರು 1.45 ಲಕ್ಷ ಮೌಲ್ಯದ ಚಿನ್ನದ ಸರವನ್ನು ಎಗರಿಸಿ ಪರಾರಿಯಾಗಿದ್ದಳು ಎನ್ನಲಾಗಿದೆ. ಹಿರಿಯಡ್ಕ ಪೊಲೀಸರು ಈ ಬಗ್ಗೆ […]
ಪಟ್ಲ ಯು.ಎಸ್.ನಾಯಕ್ ಶಾಲಾ ವಿದ್ಯಾರ್ಥಿಗಳಿಗೆ ಬಾಲೋಪಚಾರ ಕೈಪಿಡಿ ವಿತರಣೆ

ಹಿರಿಯಡ್ಕ: ಆರೋಗ್ಯ ಭಾರತಿ ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಪ್ರಕಾಶಿತವಾದ ಆರೋಗ್ಯ ಭಾರತಿ ಕಾರ್ಕಳ ಇದರ ಅಧ್ಯಕ್ಷ ಮತ್ತು ಮೈಸೂರು ಆಯುರ್ವೇದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಸತ್ಯನಾರಾಯಣ ಭಟ್ ಅವರು ಶಾಲಾ ಮಕ್ಕಳಿಗಾಗಿ ಬರೆದ ” ಬಾಲೋಪಾಚಾರ-ನಮ್ಮ ಆರೋಗ್ಯ ನಮ್ಮ ಕೈಯಲ್ಲಿ” ಕೈಪಿಡಿಯನ್ನು ಪಟ್ಲದ ಯು.ಎಸ್.ನಾಯಕ್ ಹೈಸ್ಕೂಲಿನ ವಿದ್ಯಾರ್ಥಿಗಳಿಗೆ ಇಂದು ಉಚಿತವಾಗಿ ವಿತರಿಸಲಾಯಿತು. ಮುಖ್ಯ ಅತಿಥಿಯಾಗಿ ಆರೋಗ್ಯ ಭಾರತಿಯ ಅಖಿಲ ಭಾರತ ಸ್ವಸ್ಥಗ್ರಾಮ ಪ್ರಮುಖ್ ಹಾಗೂ ಕಾರ್ಯಕಾರಣಿ ಸದಸ್ಯ, ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಸದಾಶಿವ ಜೀ […]
ನ.10 ರಂದು ಕಾಂಗ್ರೆಸ್ ನ ವಿವಿಧ ಸಮಿತಿಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಇದರ ಆಶ್ರಯದಲ್ಲಿ ವಿವಿಧ ಮುಂಚೂಣಿ ಘಟಕಗಳಾದ ಕಾಪು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಇಂಟಕ್ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಆರ್.ಜಿ.ಪಿ.ಆರ್.ಎಸ್ ಸಮಿತಿ, ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನ.10 ರಂದು ಸುರಭಿ ಹಾಲ್, ಕೊಟ್ನಕಟ್ಟೆಯಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ-ಕಿರಿಯ ನಾಯಕರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ವಿವಿಧ ಸ್ತರದ […]
ಹಿರಿಯಡಕ: ಬೈಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ಸಾವು

ಹಿರಿಯಡಕ: ಕಾರು ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಸರ್ಕಾರಿ ಪದವಿಪೂರ್ವ ಕಾಲೇಜಿನ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತ ಯುವಕನನ್ನು ಹಿರಿಯಡಕ ಸಮೀಪದ ಪುತ್ತಿಗೆ ನಿವಾಸಿ 18ವರ್ಷ ಪ್ರಾಯ ಸ್ಟ್ಯಾಲಿನ್ ಎಂದು ಗುರುತಿಸಲಾಗಿದೆ. ಈತ ಇಂದು ಮಧ್ಯಾಹ್ನ ಹಿರಿಯಡಕ ಪೇಟೆಯಿಂದ ಪುತ್ತಿಗೆ ಕಡೆಗೆ ಹೋಗುತ್ತಿದ್ದನು. ಈ ವೇಳೆ ಎದುರಿನಿಂದ ಬಂದ ಸ್ಕೋಡಾ ಕಾರೊಂದು ಡಿಕ್ಕಿಯಾಗಿದೆ. ಇದರಿಂದ ಬೈಕ್ ಸಮೇತ ರಸ್ತೆಗೆ ಬಿದ್ದ ಸ್ಟ್ಯಾಲಿನ್ ತಲೆಗೆ ಗಂಭೀರ […]