ಪ್ರಶಾಂತ್ ನೀಲ್ ಹುಟ್ಟುಹಬ್ಬಕ್ಕೆ ಘಟಾನುಘಟಿಗಳಿಂದ ಶುಭಾಶಯಗಳ ಸುರಿಮಳೆ

ಕನ್ನಡ ಚಿತ್ರರಂಗದ ಮ್ಯಾಡ್ ಮಾನ್ ಖ್ಯಾತಿಯ, ಕೆ.ಜಿ.ಎಫ್ ನಿರ್ದೇಶಕ ಪ್ರಶಾಂತ್ ನೀಲ್ ಇಂದು ತಮ್ಮ ಜನ್ಮ ದಿನವನ್ನು ಆಚರಿಸುತ್ತಿದ್ದು, ಸಲಾರ್ ಚಿತ್ರತಂಡ, ಪ್ರಭಾಸ್ ಹಾಗೂ ಹೊಂಬಾಳೆ ಫಿಲ್ಮ್ಸ್ ಆದಿಯಾಗಿ ಎಲ್ಲರೂ ಶುಭಾಶಯಗಳನ್ನು ಕೋರುತ್ತಿದ್ದಾರೆ. ಕನ್ನಡ ಚಿತ್ರ ರಂಗದ ದಿಕ್ಕು-ದೆಸೆಯನ್ನು ಬದಲಾಯಿಸಿದ ಕೆ.ಜಿ.ಎಫ್ ಚಿತ್ರದ ಹಿಂದಿನ ಶಕ್ತಿ ಪ್ರಶಾಂತ್ ನೀಲ್. ತಮ್ಮ ಕಲ್ಪನೆಯನ್ನು ಚಿತ್ರಪರದೆಯ ಮೇಲೆ ಅತ್ಯಂತ ಅದ್ದೂರಿಯಿಂದ ತೋರಿಸುವ ನಿರ್ದೇಶಕರಲ್ಲಿ ಪ್ರಶಾಂತ್ ಕೂಡಾ ಒಬ್ಬರು. ಪ್ರಶಾಂತ್ ಇದೀಗ ಪ್ರಭಾಸ್ ಮುಖ್ಯ ಭೂಮಿಕೆಯಲ್ಲಿರುವ ಸಲಾರ್ ಚಿತ್ರದ ನಿರ್ದೇಶನದಲ್ಲಿ ವ್ಯಸ್ತರಾಗಿದ್ದು, […]

ಸೆಟ್ಟೇರುವುದಕ್ಕೂ ಮುನ್ನವೇ ವಿವಾದ ಸುಳಿಯಲ್ಲಿ ಕಾಂತಾರ-2: ನಿತ್ಯವೂ ದೈವಕ್ಕೆ ಅಪಚಾರ ನಡೆಯುತ್ತಿರುವುದನ್ನು ನೋಡಿ ಬೇಸತ್ತ ತುಳುವರು

ಬೆಂಗಳೂರು: ದೇಶ ಮಾತ್ರವಲ್ಲ ವಿದೇಶಗಳಲ್ಲೂ ತುಳುನಾಡಿನ ಕೀರ್ತಿ ಪತಾಕೆಯನ್ನು ಹಾರಿಸಿದ ಕಾಂತಾರ ಚಲನಚಿತ್ರವು ಒಂದಲ್ಲ ಒಂದು ವಿವಾದದ ಸುಳಿಯಲ್ಲಿ ಸಿಲುಕಿ ಹಾಕಿಕೊಳ್ಳುತ್ತಲೇ ಬಂದಿದೆ. ವರಾಹರೂಪಂ ಹಾಡಿನ ಮೇಲೆ ಕೃತಿ ಚೌರ್ಯದ ಆರೋಪದಿಂದ ಹಿಡಿದು ದೈವಾರಾಧನೆಗೆ ಅಪಚಾರ ಮಾಡಿದ ಆರೋಪದವರೆಗೆ ಕಾಂತಾರ ಚಿತ್ರ ಮತ್ತು ಅದರ ನಿರ್ಮಾತೃಗಳ ಸುತ್ತ ಒಂದಲ್ಲಾ ಒಂದು ರೀತಿಯಲ್ಲಿ ವಿವಾದಗಳು ಸುತ್ತಿಕೊಂಡಿವೆ. ಇದೀಗ ಈ ಆರೋಪಕ್ಕೆ ಹೊಸ ಸೇರ್ಪಡೆಯಾಗಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಗಂಗಮ್ಮ ತಾಯಿಗೆ ಪಂಜುರ್ಲಿ ದೈವದದಂತೆ ಅಲಂಕಾರ ಮಾಡಿರುವುದು ತುಳುವರ ಕೋಪಕ್ಕೆ ಕಾರಣವಾಗಿದೆ. […]

2024 ರಲ್ಲಿ ಬರಲಿದೆ ಕಾಂತಾರ ಭಾಗ-1: ಪ್ರೀಕ್ವೆಲ್ ಬಗ್ಗೆ ಮಾಹಿತಿ ನೀಡಿದ ನಿರ್ದೇಶಕ ರಿಷಬ್ ಶೆಟ್ಟಿ

ಬಹುಚರ್ಚಿತ ಮತ್ತು ವಿಶ್ವದಾದ್ಯಂತ ಜನಮನ್ನಣೆ ಗಳಿಸಿದ ಕಾಂತಾರ ಚಿತ್ರವು ಯಶಸ್ವಿ ನೂರು ದಿನಗಳನ್ನು ಪೂರೈಸಿದ್ದು, ಈ ಸಂದರ್ಭದಲ್ಲಿ ಕಾಂತಾರದ ಪೂರ್ವಾಭಾವಿ ಕಥೆಯನ್ನೊಳಗೊಂಡ ಕಾಂತಾರ ಪ್ರೀಕ್ವಲ್ ಅನ್ನು 2024ರಲ್ಲಿ ತೆರೆಗೆ ತರಲಿರುವುದಾಗಿ ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದಾರೆ. ಥಿಯೇಟರ್‌ಗಳಲ್ಲಿ “ಕಾಂತಾರ”ದ ಶತದಿನೋತ್ಸವವನ್ನು ಆಚರಿಸಲು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಿಷಬ್ ಬಹು ನಿರೀಕ್ಷಿತ ಚಿತ್ರದ ಬಗ್ಗೆ ವಿವರಗಳನ್ನು ಹಂಚಿಕೊಂಡಿದ್ದಾರೆ. ಕಾಂತಾರ ಚಿತ್ರಕ್ಕೆ ಅಪಾರ ಪ್ರೀತಿ ಮತ್ತು ಬೆಂಬಲವನ್ನು ತೋರಿಸಿದ ಪ್ರೇಕ್ಷಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ. ನಾವು ತುಂಬಾ ಸಂತೋಷದಲ್ಲಿದ್ದೇವೆ. ದೈವದ ಆಶೀರ್ವಾದದಿಂದ […]

ಯೂಟ್ಯೂಬ್ ನಲ್ಲಿ ಬಿಡುಗಡೆಯಾಯ್ತು ಗಗನ್ ಗಾಂವ್ಕರ್ ಸುಮಧುರ ಕಂಠದಲ್ಲಿ ಸಿಂಗಾರ ಸಿರಿಯೆ ತುಳು ಆವೃತ್ತಿ

ವಿಶ್ವದಾದ್ಯಂತ ಕಿಚ್ಚು ಹಚ್ಚಿದ ಕಾಂತಾರ ಚಿತ್ರದ ಸಿಂಗಾರ ಸಿರಿಯೆ ಗೀತೆಯನ್ನು ಮೆಚ್ಚದವರೇ ಇಲ್ಲ. ಇದೀಗ ಸಿಂಗಾರ ಸಿರಿಯೆ ಹಾಡಿನ ತುಳು ಆವೃತ್ತಿಯು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಪ್ರತಾಪ್ ಶೆಟ್ಟಿ ಸಾಹಿತ್ಯದ ಗೀತೆಯನ್ನು ಝೀಟಿವಿಯ ಸರೆಗಮಪ ಸಂಗೀತ ರಿಯಾಲಿಟಿ ಶೋ ವಿಜೇತ ಗಗನ್ ಗಾಂವ್ಕರ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಹಾಡಿನ ಮಿಕ್ಸಿಂಗ್ ಅನ್ನು ಉಡುಪಿಯ ನಿನಾದ್ ಆಡಿಯೋ ರೆಕಾರ್ಡಿಂಗ್ ಮಿಕ್ಸಿಂಗ್ ಸ್ಟುಡಿಯೋನ ಶರತ್ ಉಚ್ಚಿಲ ಮಾಡಿದ್ದಾರೆ.  

ಸದ್ಯಕ್ಕೆ ‘ಕಾಂತಾರ- 2’ ಬಗ್ಗೆ ಯಾವುದೇ ಯೋಜನೆಗಳಿಲ್ಲ; ಇದ್ದರೆ ಅಧಿಕೃತ ಘೋಷಣೆ ಮಾಡುತ್ತೇವೆ: ರಿಷಬ್ ಶೆಟ್ಟಿ

ನಟ, ನಿರ್ದೇಶಕ ಮತ್ತು ನಿರ್ಮಾಪಕ ರಿಷಬ್ ಶೆಟ್ಟಿ ಕಾಂತಾರ ಚಿತ್ರದ ಎರಡನೇ ಅವತರಣಿಕೆ ಬರಲಿದೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸದ್ಯಕ್ಕೆ ನಮ್ಮಲ್ಲಿ ಅಂತಹ ಯಾವುದೇ ಯೋಜನೆಗಳಿಲ್ಲ. ಕಾಂತಾರ 2 ರ ಅಂತಹ ಯಾವುದೇ ಯೋಜನೆ ಇದ್ದರೆ, ನಾವು ಅಧಿಕೃತ ಘೋಷಣೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗಷ್ಟೆ ರಿಷಬ್ ಮತ್ತು ಪ್ರಗತಿ ಶೆಟ್ಟಿ ಮಂಗಳೂರಿನ ಭೂತ ಕೋಲವೊಂದರಲ್ಲಿ ದೈವದೆದುರು ನಿಂತಿರುವ ದೃಶ್ಯಗಳನ್ನು ಉಲ್ಲೇಖಿಸಿ ರಿಷಭ್ ಕಾಂತಾರ-2 ಮಾಡಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ರಿಷಬ್ ಇದನ್ನು […]