ಮಡಿಕೇರಿ: ಕಾರಿನ ಗ್ಲಾಸ್ ಒಡೆದು ಪುಂಡಾಟ ಪ್ರದರ್ಶಿಸಿದ ಹುಚ್ಚ ವೆಂಕಟ್
![](https://udupixpress.com/wp-content/uploads/2019/08/IMG_20190829_221928.jpg)
ಮಡಿಕೇರಿ: ನಟ, ನಿರ್ದೇಶಕ ಹುಚ್ಚ ವೆಂಕಟ್ ಇಂದು ಮಡಿಕೇರಿ ನಗರದಲ್ಲಿ ಸಾರ್ವಜನಿಕವಾಗಿ ರಂಪಾಟ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಮಡಿಕೇರಿ ಬಸ್ ನಿಲ್ದಾಣದಲ್ಲಿ ಯಾವುದೇ ಕಾರಣವಿಲ್ಲದೇ ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿನ ಗಾಜು ಒಡೆದು ಹಾಕಿ ಹುಚ್ಚಾಟ ತೋರಿದ್ದಾರೆ. ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಅಲ್ಲದೆ ಸ್ಥಳದಲ್ಲಿ ನಿಂತಿದ್ದ ಸ್ಥಳಿಯ ಜನರನ್ನು ಕೂಡ ನಿಂದಿಸಿದ್ದಾರೆ. ಇದರಿಂದ ತೀವ್ರವಾಗಿ ರೊಚ್ಚಿಗೆದ್ದ ಸಾರ್ವಜನಿಕರು ಹುಚ್ಚ ವೆಂಕಟ್ ಅವರಿಗೆ ಥಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಾರು ಮಾಲೀಕ ನಾನು […]